ಮೈಸೂರು: ಇಲ್ಲಿನ ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರದ್ದು ಯಾವುದೇ ತಪ್ಪಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಡಿಸಿಎಂ ಆಗಿ ಹೇಳುತ್ತಿದ್ದೇನೆ. ಉದಯಗಿರಿ ಗಲಭೆಯಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ. ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಉದಯಗಿರಿ ಗಲಭೆಗೆ ಪೊಲೀಸರ ಕರ್ತವ್ಯ ಲೋಪ ಕಾರಣ ಎಂಬ ಸಚಿವ ರಾಜಣ್ಣ ಹೇಳಿಕೆಗೆ ಸಿಎಂ ಉತ್ತರ ಕೊಡುತ್ತಾರೆ. ಈ ಬಗ್ಗೆ ಇನ್ನು 8-10 ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡುತ್ತಾರೆ. ಇದರಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ. ಪೊಲೀಸರು ಮುಂದೆ ಆಗಬಹುದಾದ ಅನಾಹುತ ತಪ್ಪಿಸಿದ್ದಾರೆ ಎಂದರು.
ಘಟನೆಯಲ್ಲಿ ಹಲವರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ. ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದು ಹೇಳಿದರು.
ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆದಿರುವವರೆಲ್ಲರೂ 14ರಿಂದ 15 ವರ್ಷದ ಹುಡುಗರು. ಮುಖಂಡರ ಮಾತನ್ನೂ ಅವರು ಕೇಳಿಲ್ಲ. ಪೊಲೀಸರು ಗಲಭೆ ಮಾಡಿದವರನ್ನು ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ತಪ್ಪು ಮಾಡಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…