ಮೈಸೂರು ನಗರ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಮೈಸೂರು ವಿ.ವಿ ಉಪನ್ಯಾಸಕನ ವಿರುದ್ಧ ದೂರು ದಾಖಲು

ಮೈಸೂರು : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೈಸೂರು ವಿ.ವಿಯ ಸ್ಕೂಲ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕನ ವಿರುದ್ಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪನ್ಯಾಸಕ ಭರತ್ ವಿವಾಹಿತರಾಗಿದ್ದು, ಪಬ್‌ಗೆ ಬರುವಂತೆ ಒತ್ತಾಯಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಅಂಕ ಹೆಚ್ಚು ನೀಡುತ್ತೇನೆ, ಕೆಲಸ ಕೊಡಿಸುತ್ತೇನೆ ಎಂದು ಆಮಿಷವೊಡ್ಡಿ ಪೀಡಿಸಿದ್ದಾರೆ ಎನ್ನಲಾಗಿದೆ.

ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಫೇಲ್ ವಾಡುತ್ತೇನೆ ಎಂದು ಬೆದರಿಸಿದ್ದಾರೆ. ಯುವತಿಯು ಮಹಿಳಾ ಉಪನ್ಯಾಸಕರ ಬಳಿ ಈ ವಿಷಯವನ್ನು ಹೇಳಿಕೊಂಡಿದ್ದಾರೆ. ನನಗೆ ಮಾನಸಿಕವಾಗಿ ತೊಂದರೆ ನೀಡುತ್ತಿರುವ ಉಪನ್ಯಾಸಕ ಭರತ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ, ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

12 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

12 hours ago