war statue construction
ಮೈಸೂರು: ಇಲ್ಲಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ನೆನೆಗುದಿಗೆ ಬಿದ್ದಿದ್ದ ಯುದ್ಧ ಸ್ಮಾರಕ ಮತ್ತೆ ನಿರ್ಮಾಣವಾಗುತ್ತಿದ್ದು, ಪಾಲಿಕೆ ಹಾಗೂ ಮುಡಾದಿಂದಲೂ ಅನುದಾನ ಕೊಡಲು ಒಪ್ಪಿಗೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ 2018ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆಗಿದ್ದಾಗ ಈ ಯುದ್ಧ ಸ್ಮಾರಕದ ಕಾಮಗಾರಿಗೆ 1.44 ಕೋಟಿ ರೂ ಬಿಡುಗಡೆ ಮಾಡಿದ್ದರು. ಆದರೆ ಅಂದಿನಿಂದಲೂ ಕಾಮಗಾರಿ ಮಾತ್ರ ಆಮೆಗತಿಯಲ್ಲಿ ಸಾಗುತ್ತಿತ್ತು.
ಇದನ್ನೂ ಓದಿ:- ಏ.23 ರಂದು ಕೋಮುವಾದ ಧಿಕ್ಕರಿಸಿ; ಸಂವಿಧಾನ ರಕ್ಷಿಸಿ ಜನಾಕ್ರಾಂತಿ ಸಮಾವೇಶ
ಈ ಹಿನ್ನೆಲೆಯಲ್ಲಿ ಯುದ್ಧ ಸ್ಮಾರಕದ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುವಂತೆ ಜನತೆಯಿಂದ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಈಗ ಕಾಮಗಾರಿ ಚುರುಕು ಪಡೆದುಕೊಂಡಿದ್ದು, ಪಾಲಿಕೆ ಹಾಗೂ ಮುಡಾದಿಂದಲೂ ಅನುದಾನ ಕೊಡಲು ಒಪ್ಪಿಗೆ ನೀಡಲಾಗಿದೆ.
ಇದನ್ನೂ ಓದಿ:- ಕೆ.ಆರ್ ನಗರ | ಮದ್ಯದಂಗಡಿ ತೆರೆಯಲು ವಿರೋಧ, ಮಹಿಳೆಯರ ಪ್ರತಿಭಟನೆ
ಅಂದಿನ ಎಡಿಸಿಯಾಗಿದ್ದ ಮಾಜಿ ಸೈನಿಕ ಆನಂದ್ ಕುಮಾರ್ ಮೇಲ್ವಿಚಾರಣೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಸುಮಾರು 4.27 ಗುಂಟೆ ಜಾಗದಲ್ಲಿ ಸುಸಜ್ಜಿತ ಉದ್ಯಾನವನವನ್ನು ನಿರ್ಮಾಣ ಮಾಡುವುದಕ್ಕೂ ಚಿಂತನೆ ನಡೆಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಎಡಿಸಿ ಆನಂದ್ ಕುಮಾರ್ ಅವರು, ಉದ್ಯಾನವನ ನಿರ್ಮಾಣಕ್ಕೆ ಹಣ ಮೀಸಲಿಡಲಾಗಿದೆ. ಆದಷ್ಟು ಬೇಗ ಯುದ್ಧ ಸ್ಮಾರಕ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…