ಮೈಸೂರು ನಗರ

ಸಂಭ್ರಮದಿಂದ ಪ್ರವಾಸೋದ್ಯಮ ದಿನ ಆಚರಿಸಲು ಅಗತ್ಯ ಸಿದ್ಧತೆ: ಎಂ.ಕೆ ಸವಿತಾ

ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮೈಸೂರು : ʻಪ್ರವಾಸೋದ್ಯಮ ಮತ್ತು ಶಾಂತಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ 27ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ಅರಮನೆಯ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ ಅವರು ತಿಳಿಸಿದರು.

ಇಂದು ಪ್ರವಾಸೋದ್ಯಮ ಇಲಾಖೆಯ ಸಭಾಂಗಣದಲ್ಲಿ ನಡೆದ, ವಿಶ್ವ ಪ್ರವಾಸೋದ್ಯಮ ದಿನಾಚರಣಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಂತಿ ಹಾಗೂ ಭದ್ರತೆ ಇರುವಂತಹ ರಾಷ್ಟ್ರಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹಾಗಾಗಿ ಕಾರ್ಯಕ್ರಮದಲ್ಲಿ ಸರ್ವಧರ್ಮದ ಜನರನ್ನು ಒಳಗೊಂಡು ಅಂದು ಕಾರ್ಯಕ್ರಮದಲ್ಲಿ ಮೆರವಣಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಉದ್ಘಾಟನೆಯ ನಂತರ ಅರಮನೆಯಿಂದ ಹೈವೆ ಸರ್ಕಲ್ ವರೆಗೆ ಮೆರವಣಿಗೆಯನ್ನು ಏರ್ಪಡಿಸಲಾಗಿದ್ದು, ಇದರಲ್ಲಿ ಗಜಪಡೆ, ಪೊಲೀಸ್ ಬ್ಯಾಂಡ್, ನಾದಸ್ವರ, ಡೊಳ್ಳುಕುಣಿತ, ಕಂಸಾಳೆ, ವೀರಗಾಸೆ, ಕೊಡವ ನೃತ್ಯ ,ಟಿಬೇಟಿಯನ್ ನೃತ್ಯ ಹಾಗೂ ಕೇರಳ ಚೆಂಡೆ ಸೇರಿದಂತೆ ಇನ್ನಿತರ ಕಲಾತಂಡಗಳ ಪ್ರದರ್ಶನ ಸೇರಿದಂತೆ ಪ್ರವಾಸಿಗರ ಗಮನ ಸೆಳೆಯುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು.

ಮೆರವಣಿಗೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಧಿಕಾರಿಗಳು, ಸಂಘ-ಸಂಸ್ಥೆಗಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಶಾಂತಿಯ ಸಂಕೇತವಾದ ಬಿಳಿ ವಸ್ತ್ರವನ್ನು ಧರಿಸಬೇಕು. ಮೆರವಣಿಗೆಯಲ್ಲಿ ಭಾಗವಹಿಸುವ ಕಲಾತಂಡಗಳು ಹಾಗೂ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮತ್ತು ಭಾಗವಹಿಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಮಾನ್ಯ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ .ಸಿ ಮಹದೇವಪ್ಪನವರು ಅನಾವರಣಗೊಳಿಸಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅರಮನೆ ಮಂಡಳಿಯ ಉಪ ನಿರ್ದೇಶಕರಾದ ಸುಬ್ರಮಣ್ಯ, ಕರ್ನಾಟಕ ದಸರಾ ವಸ್ತುಪ್ರದರ್ಶನದ ಕಾರ್ಯನಿರ್ವಹಣಾಧಿಕಾರಿ ರುದ್ರೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ. ಕೆ ಹರೀಶ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಭುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್, ಮೈಸೂರು ಟ್ರಾವಲ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ಜಯಪ್ರಕಾಶ್‌ ರಾಜೇ ಅರಸ್‌, ಸ್ಕಾಲ್‌ ಇಂಟರ್‌ನ್ಯಾಷನಲ್‌ ಮೈಸೂರು ವಿಭಾಗದ ಅಧ್ಯಕ್ಷ ಬಿ.ಎಸ್.ಪ್ರಶಾಂತ್‌, ಟೂರಿಸ್ಟ್‌ ಗೈಡ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ಎಸ್.ಜೆ.ಅಶೋಕ್‌, ಚಾಲಕರ ಸಂಘದ ಅಧ್ಯಕ್ಷರಾದ ನಾಗರಾಜು, ಡಿ.ದೇವರಾಜು ಅರಸು ರಸ್ತೆ ಅಂಗಡಿ ಮಾಲೀಕರ ಹಾಗೂ ಬಾಡಿಗೆದಾರರು ಸಂಘದ ಅಧ್ಯಕ್ಷರಾದ ಪ್ರಕಾಶ್ ಕೆ.ಜಿ. , ಹೋಟೆಲ್ ಜೇಡ್ ಗಾರ್ಡ್ ನ್ ಭರತ್ ಗೌಡ, ಅರೋಹಿ ಹೋಟೆಲ್ ನ ಸಮರ್ಥ್ ವೈದ್ಯ ಸೇರಿದಂತೆ ಇತರರು  ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

13 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

16 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

19 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

19 hours ago