dasars
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2025ರ ಹಿನ್ನಲೆಯಲ್ಲಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆ ಇಂದಿನಿಂದ ತಾಲೀಮು ಆರಂಭಿಸಿವೆ.
ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದ್ದು, ವಿಶ್ವ ಆನೆಗಳ ದಿನವೇ ತಾಲೀಮು ಆರಂಭವಾಗಿರುವುದು ವಿಶೇಷವೆನಿಸಿದೆ.
ಕ್ಯಾಪ್ಟನ್ ಅಭಿಮನ್ಯು ನೇತೃತದ 9 ಆನೆಗಳೂ ತಾಲೀಮಿನಲ್ಲಿ ಭಾಗಿಯಾಗಿ, ಕೆ.ಆರ್ ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ಸರ್ಕಲ್, ಬನ್ನಿಮಂಟಪ ರಸ್ತೆ ಮಾರ್ಗ ಹಳೆ ಆರ್ ಎಂಸಿ ಮಾರುಕಟ್ಟೆವರೆಗೆ ತಲುಪಿ ಅರಮನೆಗೆ ವಾಪಸ್ ಆಗಿವೆ.
ಈ ವೇಳೆ ನೂರಾರು ಜನರು ರಸ್ತೆ ಇಕ್ಕೆಲಗಳಲ್ಲಿ ನಿಂತು ಆನೆಗಳನ್ನು ಕಣ್ತುಂಬಿಕೊಂಡರು. ರಾಜಬೀದಿಯಲ್ಲಿ ಗಜ ಗಾಂಭೀರ್ಯದಿಂದ ಸಾಗಿದ ಗಜಪಡೆಯನ್ನು ನೋಡಿ ಖುಷಿಯಿಂದ ಫೋಟೋ ತೆಗೆದುಕೊಂಡರು.
ಇನ್ನು ಮೊದಲ ಹಂತದಲ್ಲಿ ಸಾಮಾನ್ಯ ತಾಲೀಮು ನಡೆಸಲಾಗಿದ್ದು, ಕೆಲವು ದಿನಗಳ ಬಳಿಕ ಮರಳಿನ ಮೂಟೆ ಹೊತ್ತು ತಾಲೀಮು ನಡೆಸಲಾಗುತ್ತದೆ. ದಸರಾ ಸಮೀಪಿಸುತ್ತಿದ್ದಂತೆ ಮರದ ಅಂಬಾರಿ ತಾಲೀಮು ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ದಸರಾ ಗಜಪಡೆ ಹಂತ ಹಂತವಾಗಿ ವಿವಿಧ ತಾಲೀಮಿನಲ್ಲಿ ಭಾಗಿಯಾಗಲಿವೆ.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…