ಮೈಸೂರು ನಗರ

ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ತಾಲೀಮು ಆರಂಭಿಸಿದ ಗಜಪಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2025ರ ಹಿನ್ನಲೆಯಲ್ಲಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆ ಇಂದಿನಿಂದ ತಾಲೀಮು ಆರಂಭಿಸಿವೆ.

ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದ್ದು, ವಿಶ್ವ ಆನೆಗಳ ದಿನವೇ ತಾಲೀಮು ಆರಂಭವಾಗಿರುವುದು ವಿಶೇಷವೆನಿಸಿದೆ.

ಕ್ಯಾಪ್ಟನ್ ಅಭಿಮನ್ಯು ನೇತೃತದ 9 ಆನೆಗಳೂ ತಾಲೀಮಿನಲ್ಲಿ ಭಾಗಿಯಾಗಿ, ಕೆ.ಆರ್ ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ಸರ್ಕಲ್, ಬನ್ನಿಮಂಟಪ ರಸ್ತೆ ಮಾರ್ಗ ಹಳೆ ಆರ್ ಎಂಸಿ ಮಾರುಕಟ್ಟೆವರೆಗೆ ತಲುಪಿ ಅರಮನೆಗೆ ವಾಪಸ್ ಆಗಿವೆ.

ಈ ವೇಳೆ ನೂರಾರು ಜನರು ರಸ್ತೆ ಇಕ್ಕೆಲಗಳಲ್ಲಿ ನಿಂತು ಆನೆಗಳನ್ನು ಕಣ್ತುಂಬಿಕೊಂಡರು. ರಾಜಬೀದಿಯಲ್ಲಿ ಗಜ ಗಾಂಭೀರ್ಯದಿಂದ ಸಾಗಿದ ಗಜಪಡೆಯನ್ನು ನೋಡಿ ಖುಷಿಯಿಂದ ಫೋಟೋ ತೆಗೆದುಕೊಂಡರು.

ಇನ್ನು ಮೊದಲ ಹಂತದಲ್ಲಿ ಸಾಮಾನ್ಯ ತಾಲೀಮು ನಡೆಸಲಾಗಿದ್ದು, ಕೆಲವು ದಿನಗಳ ಬಳಿಕ ಮರಳಿನ‌ ಮೂಟೆ ಹೊತ್ತು ತಾಲೀಮು ನಡೆಸಲಾಗುತ್ತದೆ. ದಸರಾ ಸಮೀಪಿಸುತ್ತಿದ್ದಂತೆ ಮರದ ಅಂಬಾರಿ ತಾಲೀಮು ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ದಸರಾ ಗಜಪಡೆ ಹಂತ ಹಂತವಾಗಿ ವಿವಿಧ ತಾಲೀಮಿನಲ್ಲಿ ಭಾಗಿಯಾಗಲಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

5 mins ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

7 mins ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

9 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

12 mins ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

20 mins ago