dasars
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2025ರ ಹಿನ್ನಲೆಯಲ್ಲಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆ ಇಂದಿನಿಂದ ತಾಲೀಮು ಆರಂಭಿಸಿವೆ.
ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದ್ದು, ವಿಶ್ವ ಆನೆಗಳ ದಿನವೇ ತಾಲೀಮು ಆರಂಭವಾಗಿರುವುದು ವಿಶೇಷವೆನಿಸಿದೆ.
ಕ್ಯಾಪ್ಟನ್ ಅಭಿಮನ್ಯು ನೇತೃತದ 9 ಆನೆಗಳೂ ತಾಲೀಮಿನಲ್ಲಿ ಭಾಗಿಯಾಗಿ, ಕೆ.ಆರ್ ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ಸರ್ಕಲ್, ಬನ್ನಿಮಂಟಪ ರಸ್ತೆ ಮಾರ್ಗ ಹಳೆ ಆರ್ ಎಂಸಿ ಮಾರುಕಟ್ಟೆವರೆಗೆ ತಲುಪಿ ಅರಮನೆಗೆ ವಾಪಸ್ ಆಗಿವೆ.
ಈ ವೇಳೆ ನೂರಾರು ಜನರು ರಸ್ತೆ ಇಕ್ಕೆಲಗಳಲ್ಲಿ ನಿಂತು ಆನೆಗಳನ್ನು ಕಣ್ತುಂಬಿಕೊಂಡರು. ರಾಜಬೀದಿಯಲ್ಲಿ ಗಜ ಗಾಂಭೀರ್ಯದಿಂದ ಸಾಗಿದ ಗಜಪಡೆಯನ್ನು ನೋಡಿ ಖುಷಿಯಿಂದ ಫೋಟೋ ತೆಗೆದುಕೊಂಡರು.
ಇನ್ನು ಮೊದಲ ಹಂತದಲ್ಲಿ ಸಾಮಾನ್ಯ ತಾಲೀಮು ನಡೆಸಲಾಗಿದ್ದು, ಕೆಲವು ದಿನಗಳ ಬಳಿಕ ಮರಳಿನ ಮೂಟೆ ಹೊತ್ತು ತಾಲೀಮು ನಡೆಸಲಾಗುತ್ತದೆ. ದಸರಾ ಸಮೀಪಿಸುತ್ತಿದ್ದಂತೆ ಮರದ ಅಂಬಾರಿ ತಾಲೀಮು ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ದಸರಾ ಗಜಪಡೆ ಹಂತ ಹಂತವಾಗಿ ವಿವಿಧ ತಾಲೀಮಿನಲ್ಲಿ ಭಾಗಿಯಾಗಲಿವೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…