nagara panchami
ಮೈಸೂರು: ಹಿಂದುಗಳ ಪ್ರಮುಖ ಹಬ್ಬವಾದ ನಾಗರಪಂಚಮಿಯ ಹಿನ್ನೆಲೆಯಲ್ಲಿಂದು ಭಕ್ತರು ನಾಗರಕಲ್ಲಿಗೆ ಹಾಲಿನ ಅಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು.
ದೇಶದೆಲ್ಲೆಡೆ ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು. ಒಂದೊಂದು ಭಾಗದಲ್ಲಿ ಒಂದೊಂದು ರೀತಿಯ ಪದ್ಧತಿ ಇದೆ.
ಕರ್ನಾಟಕದ ಕೆಲವು ಭಾಗಗಳಲ್ಲಿ ನಾಗರ ಕಲ್ಲುಗಳಿಗೆ ಪೂಜೆ-ಅಭಿಷೇಕ ಮಾಡಲಾಗುತ್ತದೆ. ಮತ್ತೊಂದಷ್ಟು ಪ್ರದೇಶಗಳಲ್ಲಿ ಹುತ್ತಕ್ಕೆ ಹಾಲೆರೆದು, ಅರಿಶಿಣ-ಕುಂಕುಮ ಹಾಕಿ ಪೂಜೆ ನೆರವೇರಿಸಲಾಗುತ್ತದೆ.
ನಾಗರಪಂಚಮಿಯಂದು ನಾಗನ ಪೂಜೆ ಮಾಡುವುದರಿಂದ ನಾಗ ದೋಷಗಳು ಪರಿಹಾರ ಆಗುತ್ತವೆ ಎಂಬ ನಂಬಿಕೆಯೂ ಇದೆ.
ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ದೇವಾಲಯಗಳಲ್ಲಿ ನಾಗರಪಂಚಮಿಯ ಸಂಭ್ರಮ ಮನೆಮಾಡಿದ್ದು, ಮುಂಜಾನೆಯಿಂದಲೇ ದೇಗುಲಗಳಿಗೆ ಭಕ್ತರು ಭೇಟಿ ನೀಡಿ ನಾಗರಕಲ್ಲಿಗೆ ಹಾಲಿನ ಅಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…