ಮೈಸೂರು ನಗರ

ಮೈಸೂರಿನಲ್ಲಿ ನಾಗರಪಂಚಮಿ ಸಂಭ್ರಮ: ನಾಗರಕಲ್ಲಿಗೆ ವಿಶೇಷ ಪೂಜೆ

ಮೈಸೂರು: ಹಿಂದುಗಳ ಪ್ರಮುಖ ಹಬ್ಬವಾದ ನಾಗರಪಂಚಮಿಯ ಹಿನ್ನೆಲೆಯಲ್ಲಿಂದು ಭಕ್ತರು ನಾಗರಕಲ್ಲಿಗೆ ಹಾಲಿನ ಅಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು.

ದೇಶದೆಲ್ಲೆಡೆ ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು. ಒಂದೊಂದು ಭಾಗದಲ್ಲಿ ಒಂದೊಂದು ರೀತಿಯ ಪದ್ಧತಿ ಇದೆ.

ಕರ್ನಾಟಕದ ಕೆಲವು ಭಾಗಗಳಲ್ಲಿ ನಾಗರ ಕಲ್ಲುಗಳಿಗೆ ಪೂಜೆ-ಅಭಿಷೇಕ ಮಾಡಲಾಗುತ್ತದೆ. ಮತ್ತೊಂದಷ್ಟು ಪ್ರದೇಶಗಳಲ್ಲಿ ಹುತ್ತಕ್ಕೆ ಹಾಲೆರೆದು, ಅರಿಶಿಣ-ಕುಂಕುಮ ಹಾಕಿ ಪೂಜೆ ನೆರವೇರಿಸಲಾಗುತ್ತದೆ.

ನಾಗರಪಂಚಮಿಯಂದು ನಾಗನ ಪೂಜೆ ಮಾಡುವುದರಿಂದ ನಾಗ ದೋಷಗಳು ಪರಿಹಾರ ಆಗುತ್ತವೆ ಎಂಬ ನಂಬಿಕೆಯೂ ಇದೆ.

ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ದೇವಾಲಯಗಳಲ್ಲಿ ನಾಗರಪಂಚಮಿಯ ಸಂಭ್ರಮ ಮನೆಮಾಡಿದ್ದು, ಮುಂಜಾನೆಯಿಂದಲೇ ದೇಗುಲಗಳಿಗೆ ಭಕ್ತರು ಭೇಟಿ ನೀಡಿ ನಾಗರಕಲ್ಲಿಗೆ ಹಾಲಿನ ಅಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

14 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

14 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

14 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

14 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago