ಮೈಸೂರು ನಗರ

ಮೈಸೂರಿನಲ್ಲಿ ನಾಗರಪಂಚಮಿ ಸಂಭ್ರಮ: ನಾಗರಕಲ್ಲಿಗೆ ವಿಶೇಷ ಪೂಜೆ

ಮೈಸೂರು: ಹಿಂದುಗಳ ಪ್ರಮುಖ ಹಬ್ಬವಾದ ನಾಗರಪಂಚಮಿಯ ಹಿನ್ನೆಲೆಯಲ್ಲಿಂದು ಭಕ್ತರು ನಾಗರಕಲ್ಲಿಗೆ ಹಾಲಿನ ಅಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು.

ದೇಶದೆಲ್ಲೆಡೆ ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು. ಒಂದೊಂದು ಭಾಗದಲ್ಲಿ ಒಂದೊಂದು ರೀತಿಯ ಪದ್ಧತಿ ಇದೆ.

ಕರ್ನಾಟಕದ ಕೆಲವು ಭಾಗಗಳಲ್ಲಿ ನಾಗರ ಕಲ್ಲುಗಳಿಗೆ ಪೂಜೆ-ಅಭಿಷೇಕ ಮಾಡಲಾಗುತ್ತದೆ. ಮತ್ತೊಂದಷ್ಟು ಪ್ರದೇಶಗಳಲ್ಲಿ ಹುತ್ತಕ್ಕೆ ಹಾಲೆರೆದು, ಅರಿಶಿಣ-ಕುಂಕುಮ ಹಾಕಿ ಪೂಜೆ ನೆರವೇರಿಸಲಾಗುತ್ತದೆ.

ನಾಗರಪಂಚಮಿಯಂದು ನಾಗನ ಪೂಜೆ ಮಾಡುವುದರಿಂದ ನಾಗ ದೋಷಗಳು ಪರಿಹಾರ ಆಗುತ್ತವೆ ಎಂಬ ನಂಬಿಕೆಯೂ ಇದೆ.

ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ದೇವಾಲಯಗಳಲ್ಲಿ ನಾಗರಪಂಚಮಿಯ ಸಂಭ್ರಮ ಮನೆಮಾಡಿದ್ದು, ಮುಂಜಾನೆಯಿಂದಲೇ ದೇಗುಲಗಳಿಗೆ ಭಕ್ತರು ಭೇಟಿ ನೀಡಿ ನಾಗರಕಲ್ಲಿಗೆ ಹಾಲಿನ ಅಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

5 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

7 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

8 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

12 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

17 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

17 hours ago