ಮೈಸೂರು: ಮೈಸೂರಿನಲ್ಲಿಂದು ಕೇಂದ್ರ ಸಚಿವ ವಿ.ಸೋಮಣ್ಣರನ್ನು ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಭೇಟಿ ಮಾಡಿ ರೈಲ್ವೆ ಇಲಾಖೆ ಸಂಬಂಧ ಹಲವಾರು ವಿಷಯಗಳನ್ನು ಚರ್ಚೆ ನಡೆಸಿದ್ದಾರೆ.
ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ದೊಡ್ಡ ಕವಲಂದೆ ರೈಲ್ವೆ ಗೇಟ್ ನಲ್ಲಿ ಸುಮಾರು 45 ನಿಮಿಷಗಳ ಕಾಲ ರೈಲ್ವೆ ಗೇಟ್ ಹಾಕುತ್ತಿರುವುದರಿಂದ ಅಲ್ಲಿನ ಜನಸಾಮಾನ್ಯರಿಗೆ ಹೆಚ್ಚು ಸಮಸ್ಯೆಯಾಗುತ್ತಿತ್ತು. ಇದನ್ನು ಮನಗಂಡ ಶಾಸಕ ದರ್ಶನ್ ಧ್ರುವನಾರಾಯಣ್ ಅವರು, ನಿನ್ನೆ ದೊಡ್ಡ ಕವಲಂದೆ ರೈಲ್ವೆ ಗೇಟ್ ಬಳಿ ಭೇಟಿ ನೀಡಿ ವೀಕ್ಷಿಸಿದರು. ಈ ಸಮಸ್ಯೆಗೆ ಪರಿಹಾರ ಒದಗಿಸುವಂತೆ ಇಂದು ಮೈಸೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ವಿ.ಸೋಮಣ್ಣರನ್ನು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ದೊಡ್ಡ ಕವಲಂದೆ ರೈಲ್ವೆ ಗೇಟ್ 45 ನಿಮಿಷ ಹಾಕುವುದನ್ನು 15 ನಿಮಿಷಕ್ಕೆ ಇಳಿಸಬೇಕು. ನಮ್ಮ ನಂಜನಗೂಡು ತಾಲ್ಲೂಕಿನ ಚಿನ್ನದಗುಡಿ ಹುಂಡಿ ಗ್ರಾಮದಲ್ಲಿ ರೈಲ್ವೆ ಮೇಲು ಸೇತುವೆ ಕಾಮಗಾರಿ ಮಾಡಿಕೊಡಬೇಕು. ನಂಜನಗೂಡು ನಗರ ರಾಷ್ಟ್ರಪತಿ ರಸ್ತೆ ( RP ರೋಡ್ ) ಭಾರ್ಗವಿ ಚಿತ್ರಮಂದಿರ ಸಮೀಪ ರೈಲ್ವೆ ಮೇಲುಸೇತುವೆ ಮಾಡಿಕೊಡುವ ಬಗ್ಗೆ ಸಚಿವರಿಗೆ ಮನವಿ ಮಾಡಲಾಯಿತು. ಇನ್ನು ನಂಜನಗೂಡು ನಗರದ ಅಂಚೆ ಕಚೇರಿಯಿಂದ ಎರಡು ಬದಿಯಲ್ಲಿ ರೈಲ್ವೆ ಫುಟ್ ಬ್ರಿಡ್ಜ್ ಮತ್ತು ಬ್ಯಾರಿಕೇಡ್ ಅಳವಡಿಸುವ ಬಗ್ಗೆ ಮನವಿ ಮಾಡಿದ್ದು, ಈ ಎಲ್ಲಾ ಮನವಿಗಳಿಗೂ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…
ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…