ಮೈಸೂರು ನಗರ

ಉದ್ಯಮಗಳು ಬೆಳೆದಷ್ಟು, ಉದ್ಯೋಗ ಸೃಷ್ಠಿಯಾದಾಗ ಮಾತ್ರ ಬಡತನ ನಿರ್ಮೂಲನೆ ಸಾಧ್ಯ: ನಾರಾಯಣ ಮೂರ್ತಿ

ಮೈಸೂರು: ಸರ್ಕಾರ ನೇರವಾಗಿ ಉದ್ಯೋಗ ನೀಡುವ ಜೊತೆಗೆ ಉದ್ಯೋಗ ಸೃಷ್ಠಿಸುವ ಉದ್ಯಮಗಳಿಗೂ ಬೆನ್ನೆಲುಬಾಗಿ ನಿಲ್ಲಬೇಕು. ಉದ್ಯಮಗಳು ಬೆಳೆದಷ್ಟು ಉದ್ಯೋಗ ಸೃಷ್ಠಿಯಾದಾಗ ಮಾತ್ರ ಬಡತನ ನಿರ್ಮೂಲನೆ ಆಗಲು ಸಾಧ್ಯ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ಇಂದು(ಜನವರಿ.17) ಭೇರುಂಡ ಫೌಂಡೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಉದ್ಯಮಗಳ ವೇಧಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಉದ್ಯೋಗ ಸೃಷ್ಠಿಸುವುದೊಂದಿಗೆ ಉದ್ಯಮ ಕ್ಷೇತ್ರಗಳಿಗೂ ಪ್ರೋತ್ಸಾಹ ನೀಡಬೇಕು. ಆರ್ಥಿಕತೆ ನಿರ್ಮಾಣದಲ್ಲಿ ಸರ್ಕಾರದ ಪಾಲ್ಗೊಳ್ಳುವಿಕೆ ಕಡಿಮೆ ಇದ್ದಷ್ಟು ಅದರ ಫಲಿತಾಂಶ ಉತ್ತಮವಾಗಿರುತ್ತದೆ. ಸರ್ಕಾರ, ಉದ್ಯೋಗ ಮತ್ತು ಸಂಪತ್ತಿನ ಸೃಷ್ಠಿಗೆ ಪೂರಕವಾದ ನಿಯಮಗಳನ್ನು ರಚಿಸಬೇಕು. ಆಗ ಮಾತ್ರ ಸಂಗ್ರಹವಾಗುವ ತೆರಿಗೆಯನ್ನು ದೇಶದ ಅಭಿವೃದ್ಧಿಗೆ ವಿನಿಯೋಗಿಸಲು ಸಾಧ್ಯವಾಗುತ್ತದೆ ಎಂದರು.

ಸಮಾಜದ ತಳ ವರ್ಗದ ಮಗುವಿಗೂ ಉತ್ತಮ ಶಿಕ್ಷಣ, ಸೌಕರ್ಯ ಸಿಗುವಂತ ಅವಕಾಶ ಕಲ್ಪಿಸಿಕೊಡಬೇಕು. ಉಚಿತ ಹಣ ನೀಡುವುದು ಉತ್ತಮ ಯೋಜನೆ ಅಲ್ಲ. ಕೌಶಲ ಬೆಳೆಸುವುದು, ಶಿಕ್ಷಣ ನೀಡುವುದು, ತನ್ನ ಕಾಲ ಮೇಲೆ ನಿಲ್ಲುವಂತೆ ಮಾಡುವುದು ನಮ್ಮ ಆದ್ಯತೆ ಆಗಬೇಕು. ಆದರೆ ಉದ್ಯೋಗ ನೀಡುವುದರಿಂದ ಅಭಿವೃದ್ಧಿಯಾಗುತ್ತದೆಯೇ ಹೊರತು ಹಣ ಹಂಚುವುದರಿಂದ ಅಲ್ಲ. ಗರೀಬಿ ಹಠಾವೋ ಅಂತಹ ಘೋಷಣೆಗಳು ಕೇವಲ ಹೇಳಿಕೆಗಳಿಗೆ ಅಷ್ಟೇ ಸೀಮಿತವಾಗಿದೆ. ಉದ್ಯಮಗಳು ಅಧಿಕವಾಗಿ ಬೆಳೆದಷ್ಟು ಉದ್ಯೋಗಗಳು ಸೃಷ್ಠಿಯಾಗುತ್ತವೆ. ಆಗ ಮಾತ್ರ ಸಮಾಜದಲ್ಲಿ ಬಡತನ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ಈ ದೇಶಕ್ಕೆ ರಾಜಕಾರಣಿಗಳು ಹಾಗೂ ಅಧಿಕಾರಿಗಳು ನಿರ್ಮಾತೃಗಳಲ್ಲ. ಉದ್ಯಮಿಗಳೇ ನಿಜವಾದ ನಿರ್ಮಾತೃಗಳಾಗಿದ್ದಾರೆ. ಅವರಿಗೆ ಮಾತ್ರ ಬಡ ರೈತ ಮತ್ತು ಕಾರ್ಮಿಕರಿಗೆ ಶಕ್ತಿ ತುಂಬುವ ಸಾಮರ್ಥ್ಯವಿರುವುದು. ಇಂದಿಗೂ 80 ಕೋಟಿ ಜನರಿಗೆ ಉಚಿತ ಪಡಿತರ ನೀಡುತ್ತಿರುವ ಭಾರತದಂತಹ ಒಂದೇ ಆರ್ಥಿಕತೆಯನ್ನು ನೆಚ್ಚಿ ಕೂರಬೇಡಿ. ಪ್ರಸ್ತುತ ಮಾರುಕಟ್ಟೆಗೆ ತಕ್ಕಂತೆ ನಿಮ್ಮ ಯೋಜನೆಗಳನ್ನು ರೂಪಿಸಿ, ಸುಸ್ಥಿರ ಹಾಗೂ ಜಾಗತಿಕ ದರ್ಜೆಯ ಗುಣಮಟ್ಟದ ಉದ್ಯಮಕ್ಕೆ ಆದ್ಯತೆ ನೀಡುವ ಆಯ್ಕೆ ನಿಮ್ಮದಾಗಿರಲಿ ಎಂದು ಉದ್ಯಮಿಗಳಿಗೆ ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

7 seconds ago

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

1 hour ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

3 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

5 hours ago