ಮೈಸೂರು ನಗರ

ಉದ್ಯಮಗಳು ಬೆಳೆದಷ್ಟು, ಉದ್ಯೋಗ ಸೃಷ್ಠಿಯಾದಾಗ ಮಾತ್ರ ಬಡತನ ನಿರ್ಮೂಲನೆ ಸಾಧ್ಯ: ನಾರಾಯಣ ಮೂರ್ತಿ

ಮೈಸೂರು: ಸರ್ಕಾರ ನೇರವಾಗಿ ಉದ್ಯೋಗ ನೀಡುವ ಜೊತೆಗೆ ಉದ್ಯೋಗ ಸೃಷ್ಠಿಸುವ ಉದ್ಯಮಗಳಿಗೂ ಬೆನ್ನೆಲುಬಾಗಿ ನಿಲ್ಲಬೇಕು. ಉದ್ಯಮಗಳು ಬೆಳೆದಷ್ಟು ಉದ್ಯೋಗ ಸೃಷ್ಠಿಯಾದಾಗ ಮಾತ್ರ ಬಡತನ ನಿರ್ಮೂಲನೆ ಆಗಲು ಸಾಧ್ಯ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ಇಂದು(ಜನವರಿ.17) ಭೇರುಂಡ ಫೌಂಡೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಉದ್ಯಮಗಳ ವೇಧಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಉದ್ಯೋಗ ಸೃಷ್ಠಿಸುವುದೊಂದಿಗೆ ಉದ್ಯಮ ಕ್ಷೇತ್ರಗಳಿಗೂ ಪ್ರೋತ್ಸಾಹ ನೀಡಬೇಕು. ಆರ್ಥಿಕತೆ ನಿರ್ಮಾಣದಲ್ಲಿ ಸರ್ಕಾರದ ಪಾಲ್ಗೊಳ್ಳುವಿಕೆ ಕಡಿಮೆ ಇದ್ದಷ್ಟು ಅದರ ಫಲಿತಾಂಶ ಉತ್ತಮವಾಗಿರುತ್ತದೆ. ಸರ್ಕಾರ, ಉದ್ಯೋಗ ಮತ್ತು ಸಂಪತ್ತಿನ ಸೃಷ್ಠಿಗೆ ಪೂರಕವಾದ ನಿಯಮಗಳನ್ನು ರಚಿಸಬೇಕು. ಆಗ ಮಾತ್ರ ಸಂಗ್ರಹವಾಗುವ ತೆರಿಗೆಯನ್ನು ದೇಶದ ಅಭಿವೃದ್ಧಿಗೆ ವಿನಿಯೋಗಿಸಲು ಸಾಧ್ಯವಾಗುತ್ತದೆ ಎಂದರು.

ಸಮಾಜದ ತಳ ವರ್ಗದ ಮಗುವಿಗೂ ಉತ್ತಮ ಶಿಕ್ಷಣ, ಸೌಕರ್ಯ ಸಿಗುವಂತ ಅವಕಾಶ ಕಲ್ಪಿಸಿಕೊಡಬೇಕು. ಉಚಿತ ಹಣ ನೀಡುವುದು ಉತ್ತಮ ಯೋಜನೆ ಅಲ್ಲ. ಕೌಶಲ ಬೆಳೆಸುವುದು, ಶಿಕ್ಷಣ ನೀಡುವುದು, ತನ್ನ ಕಾಲ ಮೇಲೆ ನಿಲ್ಲುವಂತೆ ಮಾಡುವುದು ನಮ್ಮ ಆದ್ಯತೆ ಆಗಬೇಕು. ಆದರೆ ಉದ್ಯೋಗ ನೀಡುವುದರಿಂದ ಅಭಿವೃದ್ಧಿಯಾಗುತ್ತದೆಯೇ ಹೊರತು ಹಣ ಹಂಚುವುದರಿಂದ ಅಲ್ಲ. ಗರೀಬಿ ಹಠಾವೋ ಅಂತಹ ಘೋಷಣೆಗಳು ಕೇವಲ ಹೇಳಿಕೆಗಳಿಗೆ ಅಷ್ಟೇ ಸೀಮಿತವಾಗಿದೆ. ಉದ್ಯಮಗಳು ಅಧಿಕವಾಗಿ ಬೆಳೆದಷ್ಟು ಉದ್ಯೋಗಗಳು ಸೃಷ್ಠಿಯಾಗುತ್ತವೆ. ಆಗ ಮಾತ್ರ ಸಮಾಜದಲ್ಲಿ ಬಡತನ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ಈ ದೇಶಕ್ಕೆ ರಾಜಕಾರಣಿಗಳು ಹಾಗೂ ಅಧಿಕಾರಿಗಳು ನಿರ್ಮಾತೃಗಳಲ್ಲ. ಉದ್ಯಮಿಗಳೇ ನಿಜವಾದ ನಿರ್ಮಾತೃಗಳಾಗಿದ್ದಾರೆ. ಅವರಿಗೆ ಮಾತ್ರ ಬಡ ರೈತ ಮತ್ತು ಕಾರ್ಮಿಕರಿಗೆ ಶಕ್ತಿ ತುಂಬುವ ಸಾಮರ್ಥ್ಯವಿರುವುದು. ಇಂದಿಗೂ 80 ಕೋಟಿ ಜನರಿಗೆ ಉಚಿತ ಪಡಿತರ ನೀಡುತ್ತಿರುವ ಭಾರತದಂತಹ ಒಂದೇ ಆರ್ಥಿಕತೆಯನ್ನು ನೆಚ್ಚಿ ಕೂರಬೇಡಿ. ಪ್ರಸ್ತುತ ಮಾರುಕಟ್ಟೆಗೆ ತಕ್ಕಂತೆ ನಿಮ್ಮ ಯೋಜನೆಗಳನ್ನು ರೂಪಿಸಿ, ಸುಸ್ಥಿರ ಹಾಗೂ ಜಾಗತಿಕ ದರ್ಜೆಯ ಗುಣಮಟ್ಟದ ಉದ್ಯಮಕ್ಕೆ ಆದ್ಯತೆ ನೀಡುವ ಆಯ್ಕೆ ನಿಮ್ಮದಾಗಿರಲಿ ಎಂದು ಉದ್ಯಮಿಗಳಿಗೆ ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

48 mins ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

1 hour ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

2 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

2 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

18 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

21 hours ago