ಮೈಸೂರು ನಗರ

ಮೈಸೂರಿನ ಚಿತ್ರಮಂದಿರವೊಂದರಲ್ಲಿ ರಾಷ್ಟ್ರಗೀತೆಗೆ ಅವಮಾನ: ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: ನಗರದ ಚಲನಚಿತ್ರ ಮಂದಿರವೊಂದರಲಿ ಕೆಲ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅವಮಾನ ಮಾಡಿರುವ ಪ್ರಸಂಗಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸೋಮವಾರ(ಜು.22) ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರಿಗೆ ಪವಿತ್ರ ಭೂಮಿ ಮತ್ತು ಜನ್ಮಭೂಮಿ ಒಂದೇ ಅಂತ ಭಾವನೆ ಇರುವುದಿಲ್ಲವೇ, ಮದರ್‌ ಲ್ಯಾಂಡ್‌ ಹಾಗೂ ಹೋಲಿ ಲ್ಯಾಂಡ್‌ ಕೂಡ ಇದೇನೇ ಎಂಬ ಭಾವನೆ ಇರುವುದಿಲ್ಲವೋ ಅಂಥವರಿಂದ ಈ ಹೋಲಿಕೆ ಆಗುತ್ತದೆ. ಹೋಲಿಲ್ಯಾಂಡ್‌ ಅರಬ್‌ನಲ್ಲಿ ಇದೆ ಎಂದು ಯಾರೋ ಭಾವಿಸುತ್ತಾರೋ ಅವರಿಂದ ಇಂತಹ ಸಮಸ್ಯೆಯಾಗುತ್ತದೆ ಎಂದು ಖಾರವಾಗಿ ಹೇಳಿದರು.

ಈ ಘಟನೆ ನಡೆದಾಗ ಚಿತ್ರಮಂದಿರದಲ್ಲಿದ್ದವರು ಅಂತವರಿಗೆ ಕಿವಿ ಹಿಂಡುವ ಕೆಲಸ ಮಾಡಬೇಕಿತ್ತು. ಆದರೆ ಯಾರು ಕೂಡ ಆ ಕೆಲಸ ಮಾಡಿಲ್ಲ. ಇನ್ನು ಮುಂದಾದರೂ ಈ ರೀತಿ ಆಗದಂತೆ ನೋಡಿಕೊಳ್ಳಬೇಕಿದೆ ಎಂದರು.

ಏನಿದು ಘಟನೆ?

ನಗರದ ಗೋಕುಲಂ ರಸ್ತೆಯಲ್ಲಿರುವ ಡಿ.ಆರ್‌.ಸಿ ಚಿತ್ರಮಂದಿರದಲ್ಲಿ, ನಿನ್ನೆ ರಾತ್ರಿ ಸಿನಿಮಾ ವೀಕ್ಷಣೆಯ ವೇಳೆ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಗಲಾಟೆಯಾಗಿದೆ. ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು ಹಾಗಾಗಿ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ.

ಹೀಗಾಗಿ ಜಯಲಕ್ಷ್ಮೀಪುರಂ ಇನ್ಸ್‌ ಪೆಕ್ಟ್ರ್‌ ಕುಮಾರ್‌ ನೇತೃತ್ವದಲ್ಲಿ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಇಂದು ಪೊಲೀಸರು ಚಿತ್ರಮಂದಿರಕ್ಕೆ ಭೇಟಿ ನೀಡಿ ಸಿಸಿಟಿವಿ ವಿಡಿಯೋ ಪರಿಶೀಲನೆ ಮಾಡಿದರು. ಸಿಸಿಟಿವಿ ದೃಶ್ಯಾವಳಿಗಳನ್ನ ವಶಕ್ಕೆ ಪಡೆದ ಪೊಲೀಸರು, ಬಳಿಕ ಚಿತ್ರಮಂದಿರ ಮಾಲೀಕರಿಂದ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

15 mins ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

19 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

44 mins ago

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

15 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

15 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

16 hours ago