ಮೈಸೂರು: ನಗರದ ಚಲನಚಿತ್ರ ಮಂದಿರವೊಂದರಲಿ ಕೆಲ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅವಮಾನ ಮಾಡಿರುವ ಪ್ರಸಂಗಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಮವಾರ(ಜು.22) ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರಿಗೆ ಪವಿತ್ರ ಭೂಮಿ ಮತ್ತು ಜನ್ಮಭೂಮಿ ಒಂದೇ ಅಂತ ಭಾವನೆ ಇರುವುದಿಲ್ಲವೇ, ಮದರ್ ಲ್ಯಾಂಡ್ ಹಾಗೂ ಹೋಲಿ ಲ್ಯಾಂಡ್ ಕೂಡ ಇದೇನೇ ಎಂಬ ಭಾವನೆ ಇರುವುದಿಲ್ಲವೋ ಅಂಥವರಿಂದ ಈ ಹೋಲಿಕೆ ಆಗುತ್ತದೆ. ಹೋಲಿಲ್ಯಾಂಡ್ ಅರಬ್ನಲ್ಲಿ ಇದೆ ಎಂದು ಯಾರೋ ಭಾವಿಸುತ್ತಾರೋ ಅವರಿಂದ ಇಂತಹ ಸಮಸ್ಯೆಯಾಗುತ್ತದೆ ಎಂದು ಖಾರವಾಗಿ ಹೇಳಿದರು.
ಈ ಘಟನೆ ನಡೆದಾಗ ಚಿತ್ರಮಂದಿರದಲ್ಲಿದ್ದವರು ಅಂತವರಿಗೆ ಕಿವಿ ಹಿಂಡುವ ಕೆಲಸ ಮಾಡಬೇಕಿತ್ತು. ಆದರೆ ಯಾರು ಕೂಡ ಆ ಕೆಲಸ ಮಾಡಿಲ್ಲ. ಇನ್ನು ಮುಂದಾದರೂ ಈ ರೀತಿ ಆಗದಂತೆ ನೋಡಿಕೊಳ್ಳಬೇಕಿದೆ ಎಂದರು.
ಏನಿದು ಘಟನೆ?
ನಗರದ ಗೋಕುಲಂ ರಸ್ತೆಯಲ್ಲಿರುವ ಡಿ.ಆರ್.ಸಿ ಚಿತ್ರಮಂದಿರದಲ್ಲಿ, ನಿನ್ನೆ ರಾತ್ರಿ ಸಿನಿಮಾ ವೀಕ್ಷಣೆಯ ವೇಳೆ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಗಲಾಟೆಯಾಗಿದೆ. ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು ಹಾಗಾಗಿ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ.
ಹೀಗಾಗಿ ಜಯಲಕ್ಷ್ಮೀಪುರಂ ಇನ್ಸ್ ಪೆಕ್ಟ್ರ್ ಕುಮಾರ್ ನೇತೃತ್ವದಲ್ಲಿ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಇಂದು ಪೊಲೀಸರು ಚಿತ್ರಮಂದಿರಕ್ಕೆ ಭೇಟಿ ನೀಡಿ ಸಿಸಿಟಿವಿ ವಿಡಿಯೋ ಪರಿಶೀಲನೆ ಮಾಡಿದರು. ಸಿಸಿಟಿವಿ ದೃಶ್ಯಾವಳಿಗಳನ್ನ ವಶಕ್ಕೆ ಪಡೆದ ಪೊಲೀಸರು, ಬಳಿಕ ಚಿತ್ರಮಂದಿರ ಮಾಲೀಕರಿಂದ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಹನೂರು : ನನ್ನ ವೈಯಕ್ತಿಕ ಜೀವನದಲ್ಲಿ ಇದೊಂದು ಅಮೋಘ ದಿನವಾಗಲಿದೆ ಇಂತಹ ವಿದ್ಯಾರ್ಥಿಗಳನ್ನು ಪಡೆದ ನಾವೇ ಧನ್ಯರು ಎಂದು ನಂಜನಗೂಡು…
ಹನೂರು: ಅಕ್ರಮ ನಾಡ ಬಂದೂಕು ಶೇಖರಣೆ ಮಾಡಿಟ್ಟುಕೊಂಡಿದ್ದ ವ್ಯಕ್ತಿಯನ್ನು ರಾಮಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ…
ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮದ ನಾಯಕ ಸಮುದಾಯದ ಬಡಾವಣೆಯಲ್ಲಿ ನೂತನವಾಗಿ ಅಕ್ಕ ಮಾರಮ್ಮ ದೇವಸ್ಥಾನ ನಿರ್ಮಾಣ ಮಾಡಲು ಮಾಜಿ ಶಾಸಕ…
ತಮಿಳುನಾಡು: ತಮಿಳು ಸ್ಟಾರ್ ನಟ ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಹೈದರಿ ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದಿತಿ ಹಾಗೂ…
ಕಲಬುರ್ಗಿ: ನಾಳೆ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಕಲಬುರ್ಗಿಗೆ ಆಗಮಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ…
ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ…