ಮೈಸೂರು: ನಗರದ ಚಲನಚಿತ್ರ ಮಂದಿರವೊಂದರಲಿ ಕೆಲ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅವಮಾನ ಮಾಡಿರುವ ಪ್ರಸಂಗಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಮವಾರ(ಜು.22) ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರಿಗೆ ಪವಿತ್ರ ಭೂಮಿ ಮತ್ತು ಜನ್ಮಭೂಮಿ ಒಂದೇ ಅಂತ ಭಾವನೆ ಇರುವುದಿಲ್ಲವೇ, ಮದರ್ ಲ್ಯಾಂಡ್ ಹಾಗೂ ಹೋಲಿ ಲ್ಯಾಂಡ್ ಕೂಡ ಇದೇನೇ ಎಂಬ ಭಾವನೆ ಇರುವುದಿಲ್ಲವೋ ಅಂಥವರಿಂದ ಈ ಹೋಲಿಕೆ ಆಗುತ್ತದೆ. ಹೋಲಿಲ್ಯಾಂಡ್ ಅರಬ್ನಲ್ಲಿ ಇದೆ ಎಂದು ಯಾರೋ ಭಾವಿಸುತ್ತಾರೋ ಅವರಿಂದ ಇಂತಹ ಸಮಸ್ಯೆಯಾಗುತ್ತದೆ ಎಂದು ಖಾರವಾಗಿ ಹೇಳಿದರು.
ಈ ಘಟನೆ ನಡೆದಾಗ ಚಿತ್ರಮಂದಿರದಲ್ಲಿದ್ದವರು ಅಂತವರಿಗೆ ಕಿವಿ ಹಿಂಡುವ ಕೆಲಸ ಮಾಡಬೇಕಿತ್ತು. ಆದರೆ ಯಾರು ಕೂಡ ಆ ಕೆಲಸ ಮಾಡಿಲ್ಲ. ಇನ್ನು ಮುಂದಾದರೂ ಈ ರೀತಿ ಆಗದಂತೆ ನೋಡಿಕೊಳ್ಳಬೇಕಿದೆ ಎಂದರು.
ಏನಿದು ಘಟನೆ?
ನಗರದ ಗೋಕುಲಂ ರಸ್ತೆಯಲ್ಲಿರುವ ಡಿ.ಆರ್.ಸಿ ಚಿತ್ರಮಂದಿರದಲ್ಲಿ, ನಿನ್ನೆ ರಾತ್ರಿ ಸಿನಿಮಾ ವೀಕ್ಷಣೆಯ ವೇಳೆ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಗಲಾಟೆಯಾಗಿದೆ. ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು ಹಾಗಾಗಿ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ.
ಹೀಗಾಗಿ ಜಯಲಕ್ಷ್ಮೀಪುರಂ ಇನ್ಸ್ ಪೆಕ್ಟ್ರ್ ಕುಮಾರ್ ನೇತೃತ್ವದಲ್ಲಿ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಇಂದು ಪೊಲೀಸರು ಚಿತ್ರಮಂದಿರಕ್ಕೆ ಭೇಟಿ ನೀಡಿ ಸಿಸಿಟಿವಿ ವಿಡಿಯೋ ಪರಿಶೀಲನೆ ಮಾಡಿದರು. ಸಿಸಿಟಿವಿ ದೃಶ್ಯಾವಳಿಗಳನ್ನ ವಶಕ್ಕೆ ಪಡೆದ ಪೊಲೀಸರು, ಬಳಿಕ ಚಿತ್ರಮಂದಿರ ಮಾಲೀಕರಿಂದ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…