ಮೈಸೂರು ನಗರ

ರಾಷ್ಟ್ರೀಯ ಬ್ಯಾಡ್ಮಿಂಟನ್ ಸ್ಪರ್ಧೆ: ಮೈಸೂರಿನ ಸ್ಪೋರ್ಟ್ಸ್ ಪಾರ್ಕ್‌ನ ದಿಯಾ ಭೀಮಯ್ಯಗೆ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ.

ಮೈಸೂರು: ಇದೇ ತಿಂಗಳ 20ರಿಂದ 25ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆದ 36ನೇ ಸಬ್ ಜೂನಿಯರ್ ಯೋನೆಕ್ಸ್ ಸನ್ ರೈಸ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯ ಬೆಳ್ಳಿ ಪದಕ ಗಳಿಸಿದ್ದಾರೆ.

ರಾಜ್ಯದ ಪ್ರಥಮ ಶ್ರೇಯಾಂಕಿತ ಆಟಗಾರ್ತಿಯಾದ ದಿಯಾ ಅವರು 17 ವರ್ಷದೊಳಗಿನ ಸಿಂಗಲ್ಸ್, ಡಬಲ್ಸ್ ಹಾಗು ಮಿಶ್ರ ಡಬಲ್ಸ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು.

ಇವರು ಡಬಲ್ಸ್ ನಲ್ಲಿ ತಮಿಳುನಾಡಿನ ವರ್ನಾ ಪಿ ಅವರೊಂದಿಗೆ ಕೂಡಿ ಆಡಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಿಶ್ರ ಡಬಲ್ಸ್ ನಲ್ಲಿ ಮೈಸೂರಿನ ಅಮಿತ್ ರಾಜ್ ನಟರಾಜ್ ಜೊತೆ ಕೂಡಿ ಆಡಿ ತೃತೀಯ ಸ್ಥಾನ ಗಳಿಸಿದ್ದು, ಸಿಂಗಲ್ಸ್ ನಲ್ಲಿ ಪ್ರಥಮ ಶ್ರೇಯಾಂಕಿತ ಮತ್ತು ಚಾಂಪಿಯನ್ ಆಗಿ ಹೊರ ಹೊಮ್ಮಿದ ಒಡಿಸದ ತಾನ್ವಿ ಪತ್ರಿ ಅವರಿಂದ ಕ್ವಾಟರ್ ಫೈನಲ್ ನಲ್ಲಿ ಪರಾಭವ ಹೊಂದಿದರು.

ಭಾಗವಹಿಸಿದ ಮೂರು ವಿಭಾಗದಲ್ಲಿ ಶ್ಲಾಘನೀಯ ಫಲಿತಾಂಶ ತಂದ ಇವರು ಮೈಸೂರಿನ ವಿದ್ಯಾಶ್ರಮ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ಮೇದುರ ಅರುಣ್ ಪೆಮ್ಮಯ್ಯ ಹಾಗೂ ಬೊಪ್ಪಂಡ ಭೀಮಯ್ಯ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ಹುಟ್ಟೂರು ಮಡಿಕೇರಿಯಾಗಿದ್ದು, ಮಡಿಕೇರಿಯ ದೇಚೂರಿನ ಬೊಪ್ಪಂಡ ಕುಸುಮ ಹಾಗೂ ಭೀಮಯ್ಯರ ಹೆಮ್ಮೆಯ ಪುತ್ರಿಯಾಗಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

11 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

11 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

11 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

11 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

13 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

14 hours ago