ಮೈಸೂರು: ಇದೇ ತಿಂಗಳ 20ರಿಂದ 25ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆದ 36ನೇ ಸಬ್ ಜೂನಿಯರ್ ಯೋನೆಕ್ಸ್ ಸನ್ ರೈಸ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯ ಬೆಳ್ಳಿ ಪದಕ ಗಳಿಸಿದ್ದಾರೆ.
ರಾಜ್ಯದ ಪ್ರಥಮ ಶ್ರೇಯಾಂಕಿತ ಆಟಗಾರ್ತಿಯಾದ ದಿಯಾ ಅವರು 17 ವರ್ಷದೊಳಗಿನ ಸಿಂಗಲ್ಸ್, ಡಬಲ್ಸ್ ಹಾಗು ಮಿಶ್ರ ಡಬಲ್ಸ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು.
ಇವರು ಡಬಲ್ಸ್ ನಲ್ಲಿ ತಮಿಳುನಾಡಿನ ವರ್ನಾ ಪಿ ಅವರೊಂದಿಗೆ ಕೂಡಿ ಆಡಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಿಶ್ರ ಡಬಲ್ಸ್ ನಲ್ಲಿ ಮೈಸೂರಿನ ಅಮಿತ್ ರಾಜ್ ನಟರಾಜ್ ಜೊತೆ ಕೂಡಿ ಆಡಿ ತೃತೀಯ ಸ್ಥಾನ ಗಳಿಸಿದ್ದು, ಸಿಂಗಲ್ಸ್ ನಲ್ಲಿ ಪ್ರಥಮ ಶ್ರೇಯಾಂಕಿತ ಮತ್ತು ಚಾಂಪಿಯನ್ ಆಗಿ ಹೊರ ಹೊಮ್ಮಿದ ಒಡಿಸದ ತಾನ್ವಿ ಪತ್ರಿ ಅವರಿಂದ ಕ್ವಾಟರ್ ಫೈನಲ್ ನಲ್ಲಿ ಪರಾಭವ ಹೊಂದಿದರು.
ಭಾಗವಹಿಸಿದ ಮೂರು ವಿಭಾಗದಲ್ಲಿ ಶ್ಲಾಘನೀಯ ಫಲಿತಾಂಶ ತಂದ ಇವರು ಮೈಸೂರಿನ ವಿದ್ಯಾಶ್ರಮ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ಮೇದುರ ಅರುಣ್ ಪೆಮ್ಮಯ್ಯ ಹಾಗೂ ಬೊಪ್ಪಂಡ ಭೀಮಯ್ಯ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ಹುಟ್ಟೂರು ಮಡಿಕೇರಿಯಾಗಿದ್ದು, ಮಡಿಕೇರಿಯ ದೇಚೂರಿನ ಬೊಪ್ಪಂಡ ಕುಸುಮ ಹಾಗೂ ಭೀಮಯ್ಯರ ಹೆಮ್ಮೆಯ ಪುತ್ರಿಯಾಗಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…