ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಇನ್ನೆರಡು ದಿನಗಳಲ್ಲಿ ಮೈಸೂರಿಗೆ ಭೇಟಿ ನೀಡುವ ಸಾಧ್ಯತೆಯಿದೆ.
ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರ್ಗಿಯಿಂದ ಮೈಸೂರಿಗೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು ಕುಟುಂಬಗಳು, ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು.
ಇದನ್ನು ಓದಿ: ಮೈಸೂರು ದಸರಾಗೆ ಗೊಂಬೆ ಬಲೂನ್ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆ
ಬುಧವಾರ ಚಾಮುಂಡೇಶ್ವರಿ ದೇವಸ್ಥಾನದ ತೆಪ್ಪೋತ್ಸವ ಮುಗಿಸಿ ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ಹಿಂದನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಆದರೆ ಬೆಳಿಗ್ಗೆ ಎಲ್ಲರೂ ಎದ್ದಾಗ ಬಾಲಕಿ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್ನಿಂತ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ತನಿಖೆ ಕೈಗೊಂಡ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲಂಕುಷವಾಗಿ ಮಾಹಿತಿ ತಿಳಿಯಲು ಇನ್ನೆರಡು ದಿನಗಳಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಭೇಟಿ ನೀಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರಿನಲ್ಲಿ ಕೃತ್ಯ ನಡೆದ ಸ್ಥಳ ಪರಿಶೀಲನೆ ನಡೆಸುವ ತಂಡವು, ಕಲಬುರ್ಗಿಯಲ್ಲಿ ವಾಸವಿರುವ ಮೃತ ಬಾಲಕಿಯ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದೆ.
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…