ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಇನ್ನೆರಡು ದಿನಗಳಲ್ಲಿ ಮೈಸೂರಿಗೆ ಭೇಟಿ ನೀಡುವ ಸಾಧ್ಯತೆಯಿದೆ.
ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರ್ಗಿಯಿಂದ ಮೈಸೂರಿಗೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು ಕುಟುಂಬಗಳು, ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು.
ಇದನ್ನು ಓದಿ: ಮೈಸೂರು ದಸರಾಗೆ ಗೊಂಬೆ ಬಲೂನ್ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆ
ಬುಧವಾರ ಚಾಮುಂಡೇಶ್ವರಿ ದೇವಸ್ಥಾನದ ತೆಪ್ಪೋತ್ಸವ ಮುಗಿಸಿ ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ಹಿಂದನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಆದರೆ ಬೆಳಿಗ್ಗೆ ಎಲ್ಲರೂ ಎದ್ದಾಗ ಬಾಲಕಿ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್ನಿಂತ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ತನಿಖೆ ಕೈಗೊಂಡ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲಂಕುಷವಾಗಿ ಮಾಹಿತಿ ತಿಳಿಯಲು ಇನ್ನೆರಡು ದಿನಗಳಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಭೇಟಿ ನೀಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರಿನಲ್ಲಿ ಕೃತ್ಯ ನಡೆದ ಸ್ಥಳ ಪರಿಶೀಲನೆ ನಡೆಸುವ ತಂಡವು, ಕಲಬುರ್ಗಿಯಲ್ಲಿ ವಾಸವಿರುವ ಮೃತ ಬಾಲಕಿಯ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದೆ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…