ಮೈಸೂರು: ಶರನ್ನವರಾತ್ರಿಯ ಮೂರನೇ ದಿನ ದೇವಿಯನ್ನು ಚಂದ್ರಘಂಟಾ ಎಂಬ ಹೆಸರಿನಲ್ಲಿ ಕರೆಯಲಾಗುತ್ತದೆ.
ಚಂದ್ರಿಕಾ, ರಣಚಂಡಿ ಅಂತಲೂ ಕರೆಯುತ್ತಾರೆ. ಆ ದೇವಿಯ ವಿಗ್ರಹವನ್ನು ಇರಿಸಿ, ಪೂಜೆ-ಆರಾಧನೆಯನ್ನು ಮಾಡಲಾಗುತ್ತದೆ. ಈ ದೇವಿಯ ಸ್ವರೂಪವು ಶಾಂತ ರೀತಿಯಲ್ಲಿ ಇರುತ್ತದೆ.
ತಾಯಿಯ ತಲೆ ಮೇಲೆ ಗಂಟೆಯ ಆಕಾರದಲ್ಲಿ ಅರ್ಧ ಚಂದ್ರ ಇರುವುದರಿಂದ ಚಂದ್ರಘಂಟಾ ದೇವಿ ಎಂಬ ಹೆಸರಿನಲ್ಲಿ ಕರೆಯಲಾಗುತ್ತದೆ.
ಚಂದ್ರಘಂಟಾ ದೇವಿಯು ಶುಕ್ರ ಗ್ರಹದ ಅಧಿದೇವತೆ ಆಗಿದ್ದು, ದೇವಿಯ ಆರಾಧನೆಯಿಂದ ಸಂಪತ್ತು, ಸಮೃದ್ಧಿ ದೊರೆಯುತ್ತದೆ. ಮನೆಯಲ್ಲಿ ಯಾವತ್ತಿಗೂ ಆಹಾರದ ಕೊರತೆ ಬಾರದು ಎಂದು ಹೇಳಲಾಗುತ್ತದೆ.
ನವರಾತ್ರಿಯ ಮೂರನೇ ದಿನ ಕೆಂಪು ಬಣ್ಣಕ್ಕೆ ಆದ್ಯತೆ ನೀಡಲಾಗುತ್ತದೆ. ಚಂದ್ರಘಂಟಾ ದೇವಿಯು ಧೈರ್ಯ, ಪರಾಕ್ರಮ ಹಾಗೂ ಸೌಂದರ್ಯದ ಪ್ರತೀಕವಾಗಿದ್ದು, ಕೆಂಪು ಬಣ್ಣದ ವಸ್ತ್ರಗಳಿಂದ ತಾಯಿಗೆ ಅಲಂಕಾರ, ಕೆಂಪು ಬಣ್ಣದ ಹೂವುಗಳಿಂದ ಪೂಜೆ ಮಾಡಲಾಗುತ್ತದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…