ಮೈಸೂರು ನಗರ

ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು: ಸಂಸದ ಯದುವೀರ್‌ ಸಂತಸ

ಮೈಸೂರು: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಂತಸ ವ್ಯಕ್ತಪಡಿಸಿದ್ದು, ಇದು ಅತ್ಯದ್ಭುತವಾದ ಫಲಿತಾಂಶ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ, ಮೈತ್ರಿಕೂಟಕ್ಕೆ ಸಿಕ್ಕ ಉತ್ತಮ ಫಲಿತಾಂಶ ಇದು. ಬಿಹಾರದ ಸಮಸ್ತ ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ ಎಂದು ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಇನ್ನು ಕಾಂಗ್ರೆಸ್ ನಾಯಕರಿಂದ ವೋಟ್ ಚೋರಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ನಿರೂಪಣೆಗೆ ಬೆಲೆ ಇಲ್ಲ. ಸಾಕ್ಷಿ ಇದ್ರೆ ಎಲೆಕ್ಷನ್ ಕಮಿಷನ್ ಗೆ ಹೋಗಿ ಕೊಡಿ ಎಂದು ಹೇಳಿದ್ದೀವಿ. ಇವತ್ತಿನವರೆಗೂ ಕೂಡ ಅವರು ಕೊಟ್ಟಿಲ್ಲ. ವೋಟ್ ಚೋರಿಯನ್ನು ಚುನಾವಣೆ ತಂತ್ರವಾಗಿ ಬಳಕೆ ಮಾಡ್ತಿದ್ದಾರೆ ಅಷ್ಟೇ. ಜನರ ದಿಕ್ಕು ತಪ್ಪಿಸೋದು, ಅರ್ಧ ಸತ್ಯ ಅಪಪ್ರಚಾರ ಮಾಡೋದು ಕಾಂಗ್ರೆಸ್ ತಂತ್ರ. ಆತ್ಮಾವಲೋಕನ ಮಾಡ್ಬೇಕಿರೋದು ಕಾಂಗ್ರೆಸ್ ಪಕ್ಷ. ಬಿಹಾರ ಎಲೆಕ್ಷನ್ ಟೈಮಲ್ಲಿ ಅವರ ನಾಯಕರು ವಿದೇಶದಲ್ಲಿ ಕುಳಿತು ಕಾಫಿ ಕುಡಿತಿರೋದನ್ನ ನೋಡಿದ್ದೇವೆ. ನಮ್ಮ ನಾಯಕರು ಹಳ್ಳಿ ಹಳ್ಳಿಗೂ ಹೋಗಿ ಕ್ಯಾಂಪೆನ್ ಮಾಡಿದ್ದಾರೆ. ಜನರನ್ನ ಒಂದು ಸಂಪತ್ತು ಅಂದುಕೊಂಡ್ರೆ ಜನ ನಿಮಗೆ ಪಾಠ ಕಲಿಸ್ತಾರೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ಮಾತಿಗೂ ಬೆಲೆ ಇಲ್ಲ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನು ಓದಿ: ಕರ್ನಾಟಕದಲ್ಲಿ ಬಿಹಾರ ಫಲಿತಾಂಶ ಮರುಕಳಿಸಲಿದೆ : ಎಚ್‌.ಡಿ.ಕುಮಾರವಸ್ವಾಮಿ 

ಇನ್ನು ರಾಜ್ಯದಲ್ಲಿ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, 75 ವರ್ಷದಲ್ಲಿ ಕಾಂಗ್ರೆಸ್ ಅಭಿವೃದ್ಧಿಗೆ ದೂರ. ಅಭಿವೃದ್ಧಿ ರಾಜಕಾರಣ ಕಾಂಗ್ರೆಸ್ ಮಾಡಲ್ಲ. ಸಮಾಜ ವಿಭಜನೆ ಮಾಡಿ ಲಾಭ ಪಡೆದುಕೊಳ್ಳಲು ಮುಂದಾಗುತ್ತೆ. ಭಾರತ ಈಗ ಏಕತೆಯಲ್ಲಿ ಮುನ್ನುಗ್ಗುತ್ತಿದೆ. ವಿಕಸಿತ ಭಾರತಕ್ಕೆ ಜನರ ಸ್ಪಂದನೆ ಇದೆ. ದೆಹಲಿ ಮಹಾರಾಷ್ಟ್ರ ಹರಿಯಾಣ, ಬಿಹಾರದಂತೆ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಗ್ಯಾರಂಟಿಗೂ, ಜನರ ಹಿತಕ್ಕಾಗಿ ಯೋಜನೆ ರೂಪಿಸೋದಕ್ಕೂ ವ್ಯತ್ಯಾಸ ಇದೆ. ಹಣಕಾಸಿನ ಮಿತಿಯಲ್ಲಿ ಯೋಜನೆ ರೂಪಿಸಿದ್ರೆ ಒಳ್ಳೇಯದು. ಹಣಕಾಸಿನ ಯೋಜನೆ ರೂಪಿಸಲು ಸಾಮರ್ಥ್ಯ ಇಲ್ಲದ ಸರ್ಕಾರ ಹಣಕಾಸಿನ ಯೋಜನೆ ರೂಪಿಸಿದ್ದಾರೆ. ಈಗಾಗಿ ಗ್ಯಾರಂಟಿ ಕೊಡಲಾಗದ ಪರಿಸ್ಥಿತಿಗೆ ಸರ್ಕಾರ ತಲುಪಿದೆ. ಈ ಸರ್ಕಾರಕ್ಕೆ ಆ ಸಾಮರ್ಥ್ಯ ಇಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago