ಮೈಸೂರು: ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದರೆ ಅಂತಹ ಅಧಿಕಾರಿಗಳನ್ನು ನಮ್ಮ ಸರ್ಕಾರ ಸಹಿಸಲ್ಲ. ಜಿಲ್ಲಾ ಮಂತ್ರಿಗಳೂ ಈ ವಿಚಾರದಲ್ಲಿ ಮುಲಾಜು ತೋರಿಸದೆ ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಇಂದು ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೈಸೂರು ಸಾಂಸ್ಕೃತಿಕವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಪ್ರತಿ ವರ್ಷ ದಸರಾ ಮಹೋತ್ಸವವನ್ನು ಸರ್ಕಾರ ಅತ್ಯಂತ ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಕಳೆದ ವರ್ಷ ಭೀಕರ ಬರಗಾಲ ಇತ್ತು. ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಹೀಗಾಗಿ ಬರಗಾಲ ಇಲ್ಲದಿರುವುದರಿಂದ ಅದ್ದೂರಿಯಾಗಿ, ಅರ್ಥಪೂರ್ಣವಾಗಿ ದಸರಾ ಆಚರಿಸುವ ಜೊತೆಗೆ ವೈಭವ ಮತ್ತು ಸಂಭ್ರಮಕ್ಕೆ ಕೊರತೆ ಆಗಬಾರದು. ನಮ್ಮ ಪರಂಪರೆ, ಚರಿತ್ರೆ, ಇತಿಹಾಸದ ವೈಭವ ಮಹೋತ್ಸವದಲ್ಲಿ ಮತ್ತು ಮಹೋತ್ಸವದ ಪರಿಣಾಮದಲ್ಲಿ ಜನರಿಗೆ ಕಾಣಿಸಬೇಕು ಎಂದು ತಿಳಿಸಿದರು.
ಕಳೆದ ವರ್ಷ ಬರಗಾಲ ಇದ್ದಾಗಲೂ ತೊಂದರೆ ಆಗದಷ್ಟು ವಿದ್ಯುತ್ ಉತ್ಪಾದನೆ ಮಾಡಿದ್ದೇವೆ. ಇದಕ್ಕಾಗಿ ಇಂಧನ ಇಲಾಖೆಗೆ ಅಭಿನಂದನೆ ಎಂದ ಸಿಎಂ ಸುಮಾರು ಇಪ್ಪತ್ತು ಸಾವಿರ ಕೋಟಿ ಸರ್ಕಾರದ ಮೇಲೆ ಹೊರೆ ಆದರೂ ಏಳನೇ ವೇತನ ಆಯೋಗ ಜಾರಿ ಮಾಡಿ ನಿಮ್ಮ (ಅಧಿಕಾರಿಗಳ-ಸಿಬ್ಬಂದಿಯ) ವೇತನ ಹೆಚ್ಚಿಸಿದ್ದೇವೆ. ಗ್ಯಾರಂಟಿಗಳಿಗೆ ಹಣ ಕೊಟ್ಟೂ ಕೂಡ ನಿಮ್ಮ ಕೆಲಸಕ್ಕೆ ತಕ್ಕಂತೆ ಸಂಬಳ ಕೊಡಬೇಕು ಎನ್ನುವ ಉದ್ದೇಶದಿಂದ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಿಸಿದ್ದೇವೆ ಎಂದು ಹೇಳಿದರು.
ಅಧಿಕಾರಿಗಳಿಗೆ ಜಾತಿ ಸೋಂಕು ಇರಬಾರದು
ಅಧಿಕಾರಿಗಳಿಗೆ ಯಾವುದೇ ಕಾರಣಕ್ಕೂ ಜಾತಿ ಸೋಂಕು ಇರಬಾರದು. ಸಂವಿಧಾನ ಮತ್ತು ಜಾತ್ಯತೀತವಾಗಿ ಸರ್ಕಾರದ ಕಾರ್ಯಕ್ರಮಗಳನ್ನು, ಜನರ ಸೇವೆಯನ್ನು ಮಾಡಬೇಕು ಎಂದರು.
ನಾವೆಲ್ಲಾ ಗ್ರಾಮೀಣ ಬದುಕಿನಿಂದಲೇ ಬಂದವರು. ನಮ್ಮ ಗ್ರಾಮೀಣ ಬದುಕು, ಗ್ರಾಮೀಣ ಸಮಾಜವನ್ನು ಮೇಲ್ದರ್ಜೆಗೆ ಏರಿಸಬೇಕು ಎನ್ನುವುದು ನನ್ನ ಗುರಿ. ನನ್ನ ಗುರಿಗೆ ತಕ್ಕಂತೆ ನೀವುಗಳೂ ಕೈ ಜೋಡಿಸಿ ಕೆಲಸ ಮಾಡಬೇಕು. ಏಕೆಂದರೆ ಶೇ90 ರಷ್ಟು ಅಧಿಕಾರಿ ಮತ್ತು ಸಿಬ್ಬಂದಿ ಕೂಡ ಗ್ರಾಮೀಣ ಭಾಗದಿಂದ ಬಂದವರು ಎಂದು ನೆನಪಿಸಿದರು.
ಅಧಿಕಾರಿಗಳಿಗೆ ಸಾಮಾಜಿಕ ಪ್ರಜ್ಞೆ ಹೇಗಿರಬೇಕು ಎನ್ನುವುದನ್ನು ನೆನಪಿಸಲು ಮುಖ್ಯಮಂತ್ರಿಗಳು ಡಾ.ಅಂಬೇಡ್ಕರ್ ಅವರ ಮಾತುಗಳನ್ನು, ಸಂವಿಧಾನ ಜಾರಿ ಸಭೆಯಲ್ಲಿ ಅವರು ಮಾಡಿದ ಭಾಷಣದ ಸಾಲುಗಳನ್ನು ವಿವರಿಸಿದರು.
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…