ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು ಅಬಕಾರಿ ಇಲಾಖೆ ಸಂಪೂರ್ಣ ಅಲರ್ಟ್ ಆಗಿದೆ. ಬೆಳ್ಳಂಬೆಳಗ್ಗೆಯೇ ಅಬಕಾರಿ ಪೊಲೀಸರು ಅಕ್ರಮ ಮದ್ಯ, ಡ್ರಗ್ಸ್ ಮಾರಾಟ ಜಾಲದ ಮೇಲೆ ತೀವ್ರ ಶೋಧಕಾರ್ಯ ಆರಂಭಿಸಿದ್ದಾರೆ.
ಇತ್ತೀಚೆಗೆ ಮೈಸೂರು ಹಾಗೂ ಬೆಂಗಳೂರು ನಗರಗಳಲ್ಲಿ ಡ್ರಗ್ಸ್ ಫ್ಯಾಕ್ಟರಿಗಳು ತಲೆ ಎತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಹೆಚ್ಚುವರಿ ಎಚ್ಚರಿಕೆ ವಹಿಸಿದೆ. ಎಣ್ಣೆ ಹೊಡೆದು ತೂರಾಡುವವರ ಚಲನವಲನಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, ಮದ್ಯದ ಅಂಗಡಿಗಳ ಮೇಲೂ ದಾಳಿ ನಡೆಸಲಾಗಿದೆ. ಜೊತೆಗೆ ಬಾರ್ಗಳು ಹಾಗೂ ರೆಸ್ಟೋರೆಂಟ್ಗಳಲ್ಲಿ ವಿವಿಧ ಕಡೆಗಳಲ್ಲಿ ತಲಾಶ್ ಕಾರ್ಯ ಕೈಗೊಳ್ಳಲಾಗಿದೆ.
ಅಬಕಾರಿ ಉಪಅಧೀಕ್ಷಕ ಹೆಚ್.ಕೆ. ರಮೇಶ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಮೈಸೂರಿನ ಹಲವು ಬಡಾವಣೆಗಳಲ್ಲಿ ತಪಾಸಣೆ ನಡೆಸಲಾಗಿದೆ. ಮಾದಕ ವ್ಯಸನಿಗಳ ಮೇಲೂ ಹದ್ದಿನ ಕಣ್ಣಿಟ್ಟಿರುವ ಅಬಕಾರಿ ಪೊಲೀಸರು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.
ಆಲಿಮ್ ನಗರ, ಸಾಯಿ ಬಾಬಾ ಕಾಲೋನಿ, ಅಬ್ದುಲ್ ಕಲಾಂ ನಗರ, ವಂದೇ ಮಾತರಂ ಕಾಲೋನಿ–1 ಮತ್ತು 2, ಎಲ್ಲಮ್ಮ ಕಾಲೋನಿ ಹಾಗೂ ಬೆಲವತ್ತ ಗ್ರಾಮಗಳಲ್ಲಿ ಸಾಮೂಹಿಕ ಅಬಕಾರಿ ದಾಳಿ ನಡೆಸಲಾಗಿದೆ.
ಅಕ್ರಮ ಮದ್ಯ ಅಥವಾ ಮಾದಕ ವಸ್ತುಗಳು ಪತ್ತೆಯಾದರೆ ಸಂಬಂಧಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.
ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ…
ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…
ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…
ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…