ಮೈಸೂರು ನಗರ

ಹೊಸ ವರ್ಷಾಚರಣೆ: ಮೈಸೂರಿನಲ್ಲಿ ಅಬಕಾರಿ ಪೊಲೀಸರ ಅಲರ್ಟ್

ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು ಅಬಕಾರಿ ಇಲಾಖೆ ಸಂಪೂರ್ಣ ಅಲರ್ಟ್ ಆಗಿದೆ. ಬೆಳ್ಳಂಬೆಳಗ್ಗೆಯೇ ಅಬಕಾರಿ ಪೊಲೀಸರು ಅಕ್ರಮ ಮದ್ಯ, ಡ್ರಗ್ಸ್ ಮಾರಾಟ ಜಾಲದ ಮೇಲೆ ತೀವ್ರ ಶೋಧಕಾರ್ಯ ಆರಂಭಿಸಿದ್ದಾರೆ.

ಇತ್ತೀಚೆಗೆ ಮೈಸೂರು ಹಾಗೂ ಬೆಂಗಳೂರು ನಗರಗಳಲ್ಲಿ ಡ್ರಗ್ಸ್ ಫ್ಯಾಕ್ಟರಿಗಳು ತಲೆ ಎತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಹೆಚ್ಚುವರಿ ಎಚ್ಚರಿಕೆ ವಹಿಸಿದೆ. ಎಣ್ಣೆ ಹೊಡೆದು ತೂರಾಡುವವರ ಚಲನವಲನಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, ಮದ್ಯದ ಅಂಗಡಿಗಳ ಮೇಲೂ ದಾಳಿ ನಡೆಸಲಾಗಿದೆ. ಜೊತೆಗೆ ಬಾರ್‌ಗಳು ಹಾಗೂ ರೆಸ್ಟೋರೆಂಟ್‌ಗಳಲ್ಲಿ ವಿವಿಧ ಕಡೆಗಳಲ್ಲಿ ತಲಾಶ್ ಕಾರ್ಯ ಕೈಗೊಳ್ಳಲಾಗಿದೆ.

ಅಬಕಾರಿ ಉಪಅಧೀಕ್ಷಕ ಹೆಚ್.ಕೆ. ರಮೇಶ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಮೈಸೂರಿನ ಹಲವು ಬಡಾವಣೆಗಳಲ್ಲಿ ತಪಾಸಣೆ ನಡೆಸಲಾಗಿದೆ. ಮಾದಕ ವ್ಯಸನಿಗಳ ಮೇಲೂ ಹದ್ದಿನ ಕಣ್ಣಿಟ್ಟಿರುವ ಅಬಕಾರಿ ಪೊಲೀಸರು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.

ಆಲಿಮ್ ನಗರ, ಸಾಯಿ ಬಾಬಾ ಕಾಲೋನಿ, ಅಬ್ದುಲ್ ಕಲಾಂ ನಗರ, ವಂದೇ ಮಾತರಂ ಕಾಲೋನಿ–1 ಮತ್ತು 2, ಎಲ್ಲಮ್ಮ ಕಾಲೋನಿ ಹಾಗೂ ಬೆಲವತ್ತ ಗ್ರಾಮಗಳಲ್ಲಿ ಸಾಮೂಹಿಕ ಅಬಕಾರಿ ದಾಳಿ ನಡೆಸಲಾಗಿದೆ.

ಅಕ್ರಮ ಮದ್ಯ ಅಥವಾ ಮಾದಕ ವಸ್ತುಗಳು ಪತ್ತೆಯಾದರೆ ಸಂಬಂಧಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago