ಮೈಸೂರು ನಗರ

ಪತ್ರಿಕಾ ವಿತರಕರು, ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್

ಮೈಸೂರು: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಏರ್ಪಡಿಸಿದ್ದ ಪತ್ರಿಕಾ ವಿತರಕರ ಸಮ್ಮೇಳನ‌ ಉದ್ಘಾಟಿಸಿ ಮಾತನಾಡಿದರು.

ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕೆಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ ಎಂದರು.

ಸುದ್ದಿಗಳು, ಪತ್ರಿಕೆಗಳು ಹಳತಾಗುವ ಮೊದಲು, ಓದುಗರ ಕೈಗೆ ಕಾಫಿ ಲೋಟ ಬರುವ ಮೊದಲು ಪತ್ರಿಕಾ ವಿತರಕರು ಓದುಗರ ಮನೆ ಬಾಗಿಲಿಗೆ ತಲುಪುತ್ತಾರೆ. ಇದಕ್ಕಾಗಿ ಕೋಳಿ ಕೂಗುವ ಮೊದಲೇ ಮನೆಯಿಂದ ಎದ್ದು ಹೊರಡುತ್ತಾರೆ. ನಾವು ಪತ್ರಕರ್ತರು ಬೆಚ್ಚಗೆ ಮಲಗಿರುವಾಗ ಮಳೆ, ಚಳಿ ಮತ್ತು ಪ್ರತೀಕೂಲ ವಾತಾವರಣ ಲೆಕ್ಕಿಸದೆ ಸೈಕಲ್ ತುಳಿಯಬೇಕಿದೆ ಎಂದರು.

ಒಬ್ಬ ಪತ್ರಿಕಾ ವಿತರಕನಿಗೆ ತಿಂಗಳಿಗೆ ಸಿಗುವುದು ಕೆಲವೇ ಸಾವಿರ ರೂಪಾಯಿ ಇರಬಹುದು. ಆದರೆ, ಸಾವಿರಾರು ಪತ್ರಿಕಾ ವಿತರಕರು ಸಂಗ್ರಹಿಸುವ ಚಂದಾ ಹಣ ಮತ್ತು ಸಣ್ಣ ಪ್ರಮಾಣದ ಜಾಹಿರಾತು ಹಣ ಎಲ್ಲಾ ಒಟ್ಟು ಲೆಕ್ಕ ಹಾಕಿದರೆ ಹತ್ತಾರು ಕೋಟಿ‌ ಆಗುತ್ತದೆ. ಹೀಗಾಗಿ ಪತ್ರಿಕೋದ್ಯಮದ ಮತ್ತು ರಾಜ್ಯದ ಆರ್ಥಿಕ ಚಟುವಟಿಕೆಯಲ್ಲೂ ತೊಡಗಿಸಿಕೊಂಡಿರುವ ಸಮುದಾಯವಾಗಿದೆ ಎನ್ನುವುದನ್ನು ನಾವು ಮರೆಯಬಾರದು ಎಂದರು.

ಸುತ್ತೂರು ಶ್ರೀ ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ KUWJ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪತ್ರಿಕಾ ವಿತರಕರ ಮಹಾ ಸಂಘದ ಅಧ್ಯಕ್ಷರಾದ ಶಂಬುಲಿಂಗ ಅವರು ಸೇರಿ ಹಲವು ಮಹನೀಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

23 mins ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

36 mins ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

43 mins ago

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

1 hour ago

‘ಬಿಗ್ ಬಾಸ್’ ಗಿಲ್ಲಿಗೆ ಸಿಎಂ ಅಭಿನಂದನೆ!

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…

1 hour ago

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…

1 hour ago