ಮೈಸೂರು ನಗರ

ಪತ್ರಿಕಾ ವಿತರಕರು, ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್

ಮೈಸೂರು: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಏರ್ಪಡಿಸಿದ್ದ ಪತ್ರಿಕಾ ವಿತರಕರ ಸಮ್ಮೇಳನ‌ ಉದ್ಘಾಟಿಸಿ ಮಾತನಾಡಿದರು.

ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕೆಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ ಎಂದರು.

ಸುದ್ದಿಗಳು, ಪತ್ರಿಕೆಗಳು ಹಳತಾಗುವ ಮೊದಲು, ಓದುಗರ ಕೈಗೆ ಕಾಫಿ ಲೋಟ ಬರುವ ಮೊದಲು ಪತ್ರಿಕಾ ವಿತರಕರು ಓದುಗರ ಮನೆ ಬಾಗಿಲಿಗೆ ತಲುಪುತ್ತಾರೆ. ಇದಕ್ಕಾಗಿ ಕೋಳಿ ಕೂಗುವ ಮೊದಲೇ ಮನೆಯಿಂದ ಎದ್ದು ಹೊರಡುತ್ತಾರೆ. ನಾವು ಪತ್ರಕರ್ತರು ಬೆಚ್ಚಗೆ ಮಲಗಿರುವಾಗ ಮಳೆ, ಚಳಿ ಮತ್ತು ಪ್ರತೀಕೂಲ ವಾತಾವರಣ ಲೆಕ್ಕಿಸದೆ ಸೈಕಲ್ ತುಳಿಯಬೇಕಿದೆ ಎಂದರು.

ಒಬ್ಬ ಪತ್ರಿಕಾ ವಿತರಕನಿಗೆ ತಿಂಗಳಿಗೆ ಸಿಗುವುದು ಕೆಲವೇ ಸಾವಿರ ರೂಪಾಯಿ ಇರಬಹುದು. ಆದರೆ, ಸಾವಿರಾರು ಪತ್ರಿಕಾ ವಿತರಕರು ಸಂಗ್ರಹಿಸುವ ಚಂದಾ ಹಣ ಮತ್ತು ಸಣ್ಣ ಪ್ರಮಾಣದ ಜಾಹಿರಾತು ಹಣ ಎಲ್ಲಾ ಒಟ್ಟು ಲೆಕ್ಕ ಹಾಕಿದರೆ ಹತ್ತಾರು ಕೋಟಿ‌ ಆಗುತ್ತದೆ. ಹೀಗಾಗಿ ಪತ್ರಿಕೋದ್ಯಮದ ಮತ್ತು ರಾಜ್ಯದ ಆರ್ಥಿಕ ಚಟುವಟಿಕೆಯಲ್ಲೂ ತೊಡಗಿಸಿಕೊಂಡಿರುವ ಸಮುದಾಯವಾಗಿದೆ ಎನ್ನುವುದನ್ನು ನಾವು ಮರೆಯಬಾರದು ಎಂದರು.

ಸುತ್ತೂರು ಶ್ರೀ ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ KUWJ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪತ್ರಿಕಾ ವಿತರಕರ ಮಹಾ ಸಂಘದ ಅಧ್ಯಕ್ಷರಾದ ಶಂಬುಲಿಂಗ ಅವರು ಸೇರಿ ಹಲವು ಮಹನೀಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

7 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

7 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

7 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago