ಮೈಸೂರು ನಗರ

ಪತ್ರಿಕಾ ವಿತರಕರು, ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್

ಮೈಸೂರು: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಏರ್ಪಡಿಸಿದ್ದ ಪತ್ರಿಕಾ ವಿತರಕರ ಸಮ್ಮೇಳನ‌ ಉದ್ಘಾಟಿಸಿ ಮಾತನಾಡಿದರು.

ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕೆಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ ಎಂದರು.

ಸುದ್ದಿಗಳು, ಪತ್ರಿಕೆಗಳು ಹಳತಾಗುವ ಮೊದಲು, ಓದುಗರ ಕೈಗೆ ಕಾಫಿ ಲೋಟ ಬರುವ ಮೊದಲು ಪತ್ರಿಕಾ ವಿತರಕರು ಓದುಗರ ಮನೆ ಬಾಗಿಲಿಗೆ ತಲುಪುತ್ತಾರೆ. ಇದಕ್ಕಾಗಿ ಕೋಳಿ ಕೂಗುವ ಮೊದಲೇ ಮನೆಯಿಂದ ಎದ್ದು ಹೊರಡುತ್ತಾರೆ. ನಾವು ಪತ್ರಕರ್ತರು ಬೆಚ್ಚಗೆ ಮಲಗಿರುವಾಗ ಮಳೆ, ಚಳಿ ಮತ್ತು ಪ್ರತೀಕೂಲ ವಾತಾವರಣ ಲೆಕ್ಕಿಸದೆ ಸೈಕಲ್ ತುಳಿಯಬೇಕಿದೆ ಎಂದರು.

ಒಬ್ಬ ಪತ್ರಿಕಾ ವಿತರಕನಿಗೆ ತಿಂಗಳಿಗೆ ಸಿಗುವುದು ಕೆಲವೇ ಸಾವಿರ ರೂಪಾಯಿ ಇರಬಹುದು. ಆದರೆ, ಸಾವಿರಾರು ಪತ್ರಿಕಾ ವಿತರಕರು ಸಂಗ್ರಹಿಸುವ ಚಂದಾ ಹಣ ಮತ್ತು ಸಣ್ಣ ಪ್ರಮಾಣದ ಜಾಹಿರಾತು ಹಣ ಎಲ್ಲಾ ಒಟ್ಟು ಲೆಕ್ಕ ಹಾಕಿದರೆ ಹತ್ತಾರು ಕೋಟಿ‌ ಆಗುತ್ತದೆ. ಹೀಗಾಗಿ ಪತ್ರಿಕೋದ್ಯಮದ ಮತ್ತು ರಾಜ್ಯದ ಆರ್ಥಿಕ ಚಟುವಟಿಕೆಯಲ್ಲೂ ತೊಡಗಿಸಿಕೊಂಡಿರುವ ಸಮುದಾಯವಾಗಿದೆ ಎನ್ನುವುದನ್ನು ನಾವು ಮರೆಯಬಾರದು ಎಂದರು.

ಸುತ್ತೂರು ಶ್ರೀ ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ KUWJ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪತ್ರಿಕಾ ವಿತರಕರ ಮಹಾ ಸಂಘದ ಅಧ್ಯಕ್ಷರಾದ ಶಂಬುಲಿಂಗ ಅವರು ಸೇರಿ ಹಲವು ಮಹನೀಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

2 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

5 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

6 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

7 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

7 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

7 hours ago