ಮೈಸೂರು: ಮುಂದಿನ 30 ವರ್ಷ ಮೂಲಭೂತ ಸೌಕರ್ಯಗಳ ಸಮಸ್ಯೆ ಆಗದಂತೆ ಅಭಿವೃದ್ಧಿ ಮಾಡುವುದಾಗಿ ಶಾಸಕ ಕೆ.ಹರೀಶ್ ಗೌಡ ಭರವಸೆ ನೀಡಿದ್ದಾರೆ.
ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ 21ನೇ ವಾರ್ಡ್ ವ್ಯಾಪ್ತಿಯ ಕುದುರೆಮಾಳ ಹಾಗೂ ಕುಕ್ಕರಹಳ್ಳಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಇದಲ್ಲದೇ ಕುಕ್ಕರಹಳ್ಳಿ ರಂಗಮಂಟಪ ಹಾಗೂ ಅಂಬೇಡ್ಕರ್ ಸಮುದಾಯ ಭವನದ ಒಂದನೇ ಮಹಡಿಯ ಕಟ್ಟಡದ ಉದ್ಘಾಟನೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಅತಿ ಹೆಚ್ಚು ಮತಗಳನ್ನು ಈ ಭಾಗದ ಜನತೆ ನನಗೆ ನೀಡಿ ಆಶೀರ್ವದಿಸಿದ್ದಾರೆ. ಹಳೆಯದಾದ ಒಳಚರಂಡಿ ವ್ಯವಸ್ಥೆ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ ಎಂದರು.
ಈ ಭಾಗದಲ್ಲಿ ಮುಂದಿನ 30 ವರ್ಷಗಳ ಕಾಲ ಮೂಲಭೂತ ಸೌಕರ್ಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…