ಮೈಸೂರು ನಗರ

19 ಬಜೆಟ್‌ ಮಂಡಿಸುವ ಮೂಲಕ ಸಿದ್ದರಾಮಯ್ಯ ದಾಖಲೆ ಮಾಡುತ್ತಾರೆ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: 19ನೇ ಬಜೆಟ್‌ ಮಂಡಿಸುವ ಮೂಲಕ ಸಿದ್ದರಾಮಯ್ಯ ದಾಖಲೆ ಮಾಡುತ್ತಾರೆ ಎಂದು ಹೇಳುವ ಮೂಲಕ ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು, ಸಿಎಂ ಸಿದ್ದರಾಮಯ್ಯ ಮುಂದೆಯೂ ಬಜೆಟ್‌ ಮಂಡಿಸುತ್ತಾರೆ. ಒಟ್ಟು 19 ಬಜೆಟ್‌ಗಳನ್ನು ಸಿದ್ದರಾಮಯ್ಯ ಮಂಡಿಸುತ್ತಾರೆ. ಇದರಲ್ಲಿ ಯಾವುದೇ ಸಂದೇಹಗಳು ಬೇಡ ಎಂದರು.

ಇನ್ನು ಮುಂದಿನ ಬಾರಿ ಬಜೆಟ್‌ ಮಂಡನೆ ಮಾಡೋದು ಸಿದ್ದರಾಮಯ್ಯ ಅವರೇ. ಮುಂದಿನ ಬಜೆಟ್‌ ಕೂಡ ಅವರದ್ದೇ, ಅದರ ನಂತರದ ಬಜೆಟ್‌ ಕೂಡ ಅವರದ್ದೇ. ಹೈಕಮಾಂಡ್‌ ಹಾಗೂ ಶಾಸಕರು ಸಿದ್ದರಾಮಯ್ಯ ಪರ ಇದ್ದಾರೆ. ಈ ಹಿನ್ನೆಲೆಯಲ್ಲಿ 19 ಬಾರಿ ಬಜೆಟ್‌ ಮಂಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ದಾಖಲೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಮೂಲಕ ಇದು ಸಿದ್ದರಾಮಯ್ಯ ಅವರಿಗೆ ಕೊನೆಯ ಬಜೆಟ್‌ ಎಂದು ಪದೇ ಪದೇ ಹೇಳಿಕೊಳ್ಳುತ್ತಿದ್ದ ಬಿಜೆಪಿ ನಾಯಕರಿಗೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

16 mins ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

26 mins ago

ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…

31 mins ago

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…

34 mins ago

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…

43 mins ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

2 hours ago