ಮೈಸೂರು ನಗರ

ಜೆಡಿಎಸ್‌ ರಾಜ್ಯಾಧ್ಯಕ್ಷರಾಗ್ತಾರಾ ನಿಖಿಲ್‌ ಕುಮಾರಸ್ವಾಮಿ.?: ಶಾಸಕ ಹರೀಶ್‌ ಗೌಡ ಅಚ್ಚರಿಯ ಹೇಳಿಕೆ

ಮೈಸೂರು: ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ಬಳಿಕ ಖಾಲಿಯಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಸೇರಲಿದೆ ಎನ್ನಲಾಗಿದೆ.

ಈ ಬಗ್ಗೆ ಹುಣಸೂರು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್‌ ಗೌಡ ಅಚ್ಚರಿಯ ಹೇಳಿಕೆ ನೀಡಿದ್ದು, ನಿಖಿಲ್‌ ಕುಮಾರಸ್ವಾಮಿ ಜೆಡಿಎಸ್‌ ರಾಜ್ಯಾಧ್ಯಕ್ಷರಾಗುವ ಎಲ್ಲಾ ಮುನ್ಸೂಚನೆಗಳು ಕಾಣುತ್ತಿವೆ.

ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಶಾಸಕ ಹರೀಶ್‌ ಗೌಡ ಅವರು, ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ಕಾರಣ ಅವರು ದೇಶದ ಎಲ್ಲಾ ರಾಜ್ಯಗಳಿಗೂ ಪ್ರವಾಸ ಕೈಗೊಳ್ಳಬೇಕು. ವಾರದಲ್ಲಿ ನಾಲ್ಕು ದಿನ ದೆಹಲಿಯಲ್ಲಿದ್ದು, ಉಳಿದ ದಿನ ಎಲ್ಲಾ ರಾಜ್ಯಗಳಿಗೂ ತೆರಳಬೇಕು. ಹೀಗಾಗಿ ವಾರದಲ್ಲಿ ಒಂದು ದಿನ ಮಾತ್ರ ಕರ್ನಾಟಕಕ್ಕೆ ಬರುತ್ತೇನೆ ಎಂದು ಸ್ವತಃ ಅವರೇ ಹೇಳಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಪಕ್ಷದ ಜವಾಬ್ದಾರಿ ಯಾರಿಗೆ ಎಂಬ ಪ್ರಶ್ನೆ ಉದ್ಭವವಾಗಿದೆ. ಈ ಬಗ್ಗೆ ಅನೇಕರು ನಮ್ಮ ಬಳಿ ಪ್ರಶ್ನೆ ಮಾಡುತ್ತಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಅವರೇ ಪಕ್ಷವನ್ನು ರಾಜ್ಯದಲ್ಲಿ ಕಟ್ಟುತ್ತಾರೆ. ಈ ಬಗ್ಗೆ ಕುಮಾರಸ್ವಾಮಿ ಅವರೇ ನಮ್ಮ ಬಳಿ ಹೇಳಿದ್ದಾರೆ ಎಂದರು.

ಇನ್ನು ನಾನು ಯಾವುದೇ ಹುದ್ದೆ ಪಡೆಯದೇ ರಾಜ್ಯಾದ್ಯಂತ ಓಡಾಡಿ ಪಕ್ಷ ಕಟ್ಟುತ್ತೇನೆ. ಸಿನಿಮಾದಲ್ಲಿ ನಟಿಸಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಈ ಬೆನ್ನಲ್ಲೇ ಶಾಸಕ ಹರೀಶ್‌ ಗೌಡ ಕೂಡ ಈ ರೀತಿ ಹೇಳಿಕೆ ನೀಡಿರುವುದು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನೇನು ಕೆಲವೇ ದಿನಗಳಲ್ಲಿ ನಿಖಿಲ್‌ ಕುಮಾರಸ್ವಾಮಿ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಜೆಡಿಎಸ್‌ ಪಕ್ಷ ಮತ್ತೆ ಕರ್ನಾಟಕದಲ್ಲಿ ಪಾರುಪತ್ಯ ಸಾಧಿಸಲು ಎಲ್ಲಾ ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

10 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

11 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

12 hours ago