ಮೈಸೂರು ನಗರ

ಸದ್ಯಕ್ಕೆ ಮೈಸೂರು ಜಿಲ್ಲೆಯಲ್ಲಿ ಹಕ್ಕಿಜ್ವರದ ಸೋಂಕು ಕಾಣಿಸಿಕೊಂಡಿಲ್ಲ: ಡಾ.ನಾಗರಾಜು ಸ್ಪಷ್ಟನೆ

ಮೈಸೂರು: ರಾಜ್ಯದಲ್ಲಿ ಹಲವೆಡೆ ಹಕ್ಕಿ ಜ್ವರ ಉಲ್ಬಣಗೊಂಡಿದ್ದು, ಮೈಸೂರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಮಾಹಿತಿ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಹಿತಿ ನೀಡಿದ ಅವರು, ಹಕ್ಕಿಜ್ವರ ಹರಡುತ್ತಿರುವ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ನಮ್ಮ ಆಯುಕ್ತಾಲಯದಿಂದಲೂ ನಿರ್ದೇಶನ ಬಂದಿದೆ. ರಾಜ್ಯದ ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಭಾಗದಲ್ಲಿ ಹೆಚ್ಚು ಹಕ್ಕಿ ಜ್ವರ ಕಾಣಸಿಕೊಂಡಿದೆ. ಆದರೆ ನಮ್ಮ ಜಿಲ್ಲೆಯಲ್ಲಿ ಅಂತಹ ಯಾವುದೇ ಪ್ರಕರಣಗಳು ಬೆಳಕಿಗೆ ಬಂದಿಲ್ಲ. ಆದರೂ ಜಿಲ್ಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ವಿಶೇಷ ತಂಡ ರಚಿಸಿ ಜಿಲ್ಲೆಯಲ್ಲಿರುವ ಕೋಳಿ ಫಾರಂಗಳಲ್ಲಿ ಅಸಹಜವಾಗಿ ಕೋಳಿಗಳ ಸಾವಾದರೆ ಅಂತಹವುಗಳ ಮೇಲೆ ತೀವ್ರ ನಿಗಾ ವಹಿಸಲಾಗುತ್ತದೆ. ವಲಸೆ ಬಂದ ಹಕ್ಕಿಗಳ ಇಕ್ಕೆ, ಗ್ರಾಮೀಣ ಭಾಗದ ನಾಟಿ ಕೋಳಿಗಳ ಇಕ್ಕೆಗಳನ್ನು ಸಂಗ್ರಹ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸದ್ಯಕ್ಕೆ ನಮ್ಮ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಸೋಂಕು ಕಾಣಿಸಿಕೊಂಡಿಲ್ಲ. ಗಡಿ ಭಾಗದಲ್ಲೂ ವಿಶೇಷ ತಂಡಗಳನ್ನು ಕಳುಹಿಸಿ ತಪಾಸಣೆ ಮಾಡುತ್ತಿದ್ದೇವೆ. ಪಶುವೈದ್ಯರ ಸಮ್ಮುಖದಲ್ಲಿ ವಿಶೇಷ ತಂಡ ರಚಿಸಿ ಹಳ್ಳಿ-ಹಳ್ಳಿಗಳ ಕಡೆ ಭೇಟಿ ಕೊಟ್ಟು ತೀವ್ರ ನಿಗಾ ವಹಿಸಿ ಹಕ್ಕಿ ಜ್ವರದ ಸೋಂಕು ಬಾರದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

47 seconds ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

30 mins ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

39 mins ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

44 mins ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

47 mins ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

50 mins ago