ಮೈಸೂರು ನಗರ

ಸದ್ಯಕ್ಕೆ ಮೈಸೂರು ಜಿಲ್ಲೆಯಲ್ಲಿ ಹಕ್ಕಿಜ್ವರದ ಸೋಂಕು ಕಾಣಿಸಿಕೊಂಡಿಲ್ಲ: ಡಾ.ನಾಗರಾಜು ಸ್ಪಷ್ಟನೆ

ಮೈಸೂರು: ರಾಜ್ಯದಲ್ಲಿ ಹಲವೆಡೆ ಹಕ್ಕಿ ಜ್ವರ ಉಲ್ಬಣಗೊಂಡಿದ್ದು, ಮೈಸೂರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಮಾಹಿತಿ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಹಿತಿ ನೀಡಿದ ಅವರು, ಹಕ್ಕಿಜ್ವರ ಹರಡುತ್ತಿರುವ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ನಮ್ಮ ಆಯುಕ್ತಾಲಯದಿಂದಲೂ ನಿರ್ದೇಶನ ಬಂದಿದೆ. ರಾಜ್ಯದ ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಭಾಗದಲ್ಲಿ ಹೆಚ್ಚು ಹಕ್ಕಿ ಜ್ವರ ಕಾಣಸಿಕೊಂಡಿದೆ. ಆದರೆ ನಮ್ಮ ಜಿಲ್ಲೆಯಲ್ಲಿ ಅಂತಹ ಯಾವುದೇ ಪ್ರಕರಣಗಳು ಬೆಳಕಿಗೆ ಬಂದಿಲ್ಲ. ಆದರೂ ಜಿಲ್ಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ವಿಶೇಷ ತಂಡ ರಚಿಸಿ ಜಿಲ್ಲೆಯಲ್ಲಿರುವ ಕೋಳಿ ಫಾರಂಗಳಲ್ಲಿ ಅಸಹಜವಾಗಿ ಕೋಳಿಗಳ ಸಾವಾದರೆ ಅಂತಹವುಗಳ ಮೇಲೆ ತೀವ್ರ ನಿಗಾ ವಹಿಸಲಾಗುತ್ತದೆ. ವಲಸೆ ಬಂದ ಹಕ್ಕಿಗಳ ಇಕ್ಕೆ, ಗ್ರಾಮೀಣ ಭಾಗದ ನಾಟಿ ಕೋಳಿಗಳ ಇಕ್ಕೆಗಳನ್ನು ಸಂಗ್ರಹ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸದ್ಯಕ್ಕೆ ನಮ್ಮ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಸೋಂಕು ಕಾಣಿಸಿಕೊಂಡಿಲ್ಲ. ಗಡಿ ಭಾಗದಲ್ಲೂ ವಿಶೇಷ ತಂಡಗಳನ್ನು ಕಳುಹಿಸಿ ತಪಾಸಣೆ ಮಾಡುತ್ತಿದ್ದೇವೆ. ಪಶುವೈದ್ಯರ ಸಮ್ಮುಖದಲ್ಲಿ ವಿಶೇಷ ತಂಡ ರಚಿಸಿ ಹಳ್ಳಿ-ಹಳ್ಳಿಗಳ ಕಡೆ ಭೇಟಿ ಕೊಟ್ಟು ತೀವ್ರ ನಿಗಾ ವಹಿಸಿ ಹಕ್ಕಿ ಜ್ವರದ ಸೋಂಕು ಬಾರದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಒಳಮೀಸಲಾತಿ ಮೂಲಕ ಪರಿಶಿಷ್ಟ ಜಾತಿಗಳನ್ನು ಒಡೆಯುತ್ತಿರುವ ಕಾಂಗ್ರೆಸ್ : ಬಿಎಸ್‌ಪಿ ಆರೋಪ

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…

2 mins ago

ರಂಜಾನ್, ಯುಗಾದಿ ; ಎಸ್ಪಿ ಕಚೇರಿಯಲ್ಲಿ ಸೌಹಾರ್ದ ಸಭೆ

ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…

12 mins ago

2027ರ ಗಣತಿಗೆ ಡಿಜಿಟಲ್‌ ಸ್ಪರ್ಶ : ದೋಷರಹಿತವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…

19 mins ago

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

57 mins ago

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

2 hours ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

3 hours ago