ಮೈಸೂರು ನಗರ

ಸದ್ಯಕ್ಕೆ ಮೈಸೂರು ಜಿಲ್ಲೆಯಲ್ಲಿ ಹಕ್ಕಿಜ್ವರದ ಸೋಂಕು ಕಾಣಿಸಿಕೊಂಡಿಲ್ಲ: ಡಾ.ನಾಗರಾಜು ಸ್ಪಷ್ಟನೆ

ಮೈಸೂರು: ರಾಜ್ಯದಲ್ಲಿ ಹಲವೆಡೆ ಹಕ್ಕಿ ಜ್ವರ ಉಲ್ಬಣಗೊಂಡಿದ್ದು, ಮೈಸೂರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಮಾಹಿತಿ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಹಿತಿ ನೀಡಿದ ಅವರು, ಹಕ್ಕಿಜ್ವರ ಹರಡುತ್ತಿರುವ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ನಮ್ಮ ಆಯುಕ್ತಾಲಯದಿಂದಲೂ ನಿರ್ದೇಶನ ಬಂದಿದೆ. ರಾಜ್ಯದ ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಭಾಗದಲ್ಲಿ ಹೆಚ್ಚು ಹಕ್ಕಿ ಜ್ವರ ಕಾಣಸಿಕೊಂಡಿದೆ. ಆದರೆ ನಮ್ಮ ಜಿಲ್ಲೆಯಲ್ಲಿ ಅಂತಹ ಯಾವುದೇ ಪ್ರಕರಣಗಳು ಬೆಳಕಿಗೆ ಬಂದಿಲ್ಲ. ಆದರೂ ಜಿಲ್ಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ವಿಶೇಷ ತಂಡ ರಚಿಸಿ ಜಿಲ್ಲೆಯಲ್ಲಿರುವ ಕೋಳಿ ಫಾರಂಗಳಲ್ಲಿ ಅಸಹಜವಾಗಿ ಕೋಳಿಗಳ ಸಾವಾದರೆ ಅಂತಹವುಗಳ ಮೇಲೆ ತೀವ್ರ ನಿಗಾ ವಹಿಸಲಾಗುತ್ತದೆ. ವಲಸೆ ಬಂದ ಹಕ್ಕಿಗಳ ಇಕ್ಕೆ, ಗ್ರಾಮೀಣ ಭಾಗದ ನಾಟಿ ಕೋಳಿಗಳ ಇಕ್ಕೆಗಳನ್ನು ಸಂಗ್ರಹ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸದ್ಯಕ್ಕೆ ನಮ್ಮ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಸೋಂಕು ಕಾಣಿಸಿಕೊಂಡಿಲ್ಲ. ಗಡಿ ಭಾಗದಲ್ಲೂ ವಿಶೇಷ ತಂಡಗಳನ್ನು ಕಳುಹಿಸಿ ತಪಾಸಣೆ ಮಾಡುತ್ತಿದ್ದೇವೆ. ಪಶುವೈದ್ಯರ ಸಮ್ಮುಖದಲ್ಲಿ ವಿಶೇಷ ತಂಡ ರಚಿಸಿ ಹಳ್ಳಿ-ಹಳ್ಳಿಗಳ ಕಡೆ ಭೇಟಿ ಕೊಟ್ಟು ತೀವ್ರ ನಿಗಾ ವಹಿಸಿ ಹಕ್ಕಿ ಜ್ವರದ ಸೋಂಕು ಬಾರದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

4 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

4 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

4 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

4 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

4 hours ago