ಮೈಸೂರು ನಗರ

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ: ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

ಮೈಸೂರು: ಕಾಂಗ್ರೆಸ್‌ ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಎಲ್ಲಾ ಗ್ಯಾರಂಟಿಗಳು ಫೇಲ್ಯೂರ್‌ ಆಗಿವೆ. ಯಾವ ಕಡೆಯಿಂದ ತೆರಿಗೆ ಸಂಗ್ರಹ ಆಗುತ್ತಿದೆ, ಆ ಹಣವನ್ನು ಏನು ಮಾಡುತ್ತಿದ್ದೀರಿ ಎಂಬುದೇ ಗೊತ್ತಾಗುತ್ತಿಲ್ಲ. ಕೇಂದ್ರ ಸರ್ಕಾರ ಕೊಡುವ ಅನುದಾನದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಪರಸ್ಪರ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಯಾರು ಸಿಎಂ ಆಗಬೇಕೆಂದು ಮೇಲಾಟ ನಡೆಯುತ್ತಿದೆ. ಸಿಎಂ ಬದಲಾವಣೆ ವಿಚಾರ ಅವರ ಪಕ್ಷದ ಆಂತರಿಕ ವಿಚಾರ. 135 ಶಾಸಕರನ್ನು ಕರ್ನಾಟಕ ರಾಜ್ಯದ ಜನರ ನಂಬಿ ಗೆಲ್ಲಿಸಿದ್ದಾರೆ. ಅವರಿಗೆ ನ್ಯಾಯ ಕೊಡಿಸಿ ಎಂದು ಸಲಹೆ ನೀಡಿದರು.

ಇನ್ನು ದಲಿತರೊಬ್ಬರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಿ ಎಂಬ ಸಿಎಂ ಸಿದ್ದರಾಮಯ್ಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ವಿಚಾರವನ್ನು ಡೈವರ್ಟ್‌ ಮಾಡಲು ಏನೇನೋ ಮಾತನಾಡುತ್ತಿದ್ದಾರೆ. ಈ ಸರ್ಕಾರದಲ್ಲಿ ಅನೇಕರು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

23 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

23 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

23 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

23 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

23 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

23 hours ago