ಮೈಸೂರು ನಗರ

ಪ್ರಾಣಿಗಳ ದೃಷ್ಟಿಯಿಂದ ಬಂಡೀಪುರದಲ್ಲಿ ರಾತ್ರಿ ಸಂಚಾರ ಬೇಡ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ವನ್ಯಜೀವಿಗಳ ಹಿತದೃಷ್ಟಿಯಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಭಿಪ್ರಾಯ ಪಟ್ಟಿದ್ದಾರೆ.

ಕಳೆದ ಕೆಲ ದಿನಗಳಿಂದ ಬಂಡೀಪುರ ಅರಣ್ಯದಲ್ಲಿ ಹಾದುಹೋಗುವ ರಸ್ತೆಗೆ ರಾತ್ರಿ ಸಂಚಾರಕ್ಕೆ ಅವಕಾಶ ವಿಚಾರ ಭಾರೀ ಸದ್ದು ಮಾಡುತ್ತಿದೆ.

ಈ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪ್ರಾಣಿಪ್ರಿಯರು ಯಾವುದೇ ಕಾರಣಕ್ಕೂ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು. ಇದರಿಂದ ವನ್ಯಜೀವಿಗಳಿಗೆ ಅಪಾಯ ಎದುರಾಗುತ್ತಿದೆ. ಜೊತೆಗೆ ಪ್ರಾಣಿ ಬೇಟೆ ಸೇರಿದಂತೆ ಅಕ್ರಮ ಚಟುವಟಿಕೆಗಳು ಜಾಸ್ತಿಯಾಗುತ್ತವೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು, ಯಾವುದೇ ಕಾರಣಕ್ಕೂ ರಾತ್ರಿ ಸಂಚಾರಕ್ಕೆ ಅನುಮತಿ ಕೊಡಬಾರದು. ರಸ್ತೆಯಲ್ಲಿ ರಾತ್ರಿ ಸಂಚಾರದ ಅವಶ್ಯಕತೆ ಇಲ್ಲ. ಪ್ರಾಣಿಗಳ ದೃಷ್ಟಿಯಿಂದ ರಾತ್ರಿ ಸಂಚಾರ ಬೇಡ. ಸಂಚಾರಕ್ಕೆ ಈಗ ಇರುವಷ್ಟು ಅವಧಿ ಸಾಕು ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಿರೀಕಾಟಿಯಲ್ಲಿ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣ ಸಂಬಂಧ ಮುಖಂಡರೊಂದಿಗೆ ಚರ್ಚೆ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…

7 mins ago

ರಾಮನಗರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಸಾವು

ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್‌…

47 mins ago

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

4 hours ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

5 hours ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

5 hours ago