ಮೈಸೂರು ನಗರ

ಯಾರೂ ಸಹ ಮಣ್ಣನ್ನು ನಂಬಿ ಕೆಟ್ಟಿಲ್ಲ: ವಿ.ಎನ್ ಮಲ್ಲಿಕಾರ್ಜುನಸ್ವಾಮಿ

ಮೈಸೂರು: ಅಗ್ನಿ ಬನ್ನಿರಾಯ ಸಮುದಾಯದವರು ಯಾರೂ ಕೂಡ ಮಣ್ಣನ್ನು ನಂಬಿ ಕೆಟ್ಟಿಲ್ಲ. ಈ ಜಗತ್ತು ಪ್ರೀತಿಸುವಂತಹ ಅಗ್ನಿ ಸಮುದಾಯದವರಾಗಿಯೇ ಉತ್ತಮವಾಗಿ ಬೆಳೆಯುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ ಹೇಳಿದರು.

ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಶ್ರೀ ಅಗ್ನಿ ಬನ್ನಿರಾಯ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಕೃತದಲ್ಲಿ ಬನ್ನಿಯನ್ನು ವಹನಿ ಎಂದು ಕರೆಯುತ್ತಾರೆ. ಸಂಸ್ಕೃತದ ತದ್ಭವ ಅರ್ಥವಾಗಿದೆ. ಅಗ್ನಿ ಕುಲದಿಂದಲೇ ಅದರ ಸಂಕೇತವಾಗಿದೆ ಎಂದು ಹೇಳಿದರು.

ಪಾಂಡವರ ವನವಾಸದ ಸಂದರ್ಭದಲ್ಲಿ ಕೌರವರು ಕೊಟ್ಟ ಕಷ್ಟವನ್ನು ನೆನೆದು ಭೀಮ ಆ ಸಂದರ್ಭದಲ್ಲಿ ಅಗ್ನಿ ಪುತ್ರಿ ನೀನು, ನಾನು ವಾಯುಪುತ್ರ, ಬೆಂಕಿ ಗಾಳಿ ಎರಡು ಸೇರಿದರೆ ಈ ಕುರು ಕುಲದವರನ್ನು ಸುಟ್ಟು ಹಾಕದೇ ಬಿಡುವುದಿಲ್ಲ ಎಂದು ಭೀಮ ಹೇಳುತ್ತಾನೆ. ಇಂತಹ ವಂಶದ ಮೂಲ ಪುತ್ರರು ಅಗ್ನಿಬನ್ನಿರಾಯ ಎಂದು ತಿಳಿಸಿದರು.

ಸಂಶೋಧಕರಾದ ಮಧುಸೂದನ್ ಕೆ .ಆರ್ ಅವರು ಮಾತನಾಡಿ, ಅಗ್ನಿ ಬನ್ನಿರಾಯ ಜನಾಂಗದವರು ಸುಮಾರು 14 ಪಂಗಡಗಳನ್ನು ಒಳಗೊಂಡಿರುವ ಒಕ್ಕೂಟದ ಸಮಾಜ. ಈ ಒಂದು ಜನಾಂಗದಲ್ಲಿ ಇರುವವರು ಎಲ್ಲರೂ ಕೂಡ ಅಗ್ನಿಯ ಆರಾಧಕರು. ಅಗ್ನಿಯನ್ನೆ ಮೂಲವಾಗಿ ನಂಬಿಕೊಂಡು ಆರಾಧಿಸಿಕೊಂಡು ಬರುತ್ತಿರುವವರು ಎಂದು ಹೇಳಿದರು.

ನಮ್ಮ ಕರ್ನಾಟಕ ಭಾಗದಲ್ಲಿ ಅಗ್ನಿ ಬನ್ನಿರಾಯ ಎಂದು ಕರೆಯುತ್ತಾರೆ. ಅದೇ ತಮಿಳುನಾಡು ಭಾಗಗಳಲ್ಲಿ ವನ್ನಿ ಮಹಾರಾಜ ಎಂದು ಕರೆಯುತ್ತಾರೆ. ಆಂಧ್ರಪ್ರದೇಶದಲ್ಲೂ ಕೂಡ ವನ್ನಿ ಮಹಾರಾಜ ಎಂದು ಪೂಜಿಸುತ್ತಾರೆ. ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

6 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

7 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

7 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

8 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

8 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

8 hours ago