ಮೈಸೂರು ನಗರ

ಯಾರೂ ಸಹ ಮಣ್ಣನ್ನು ನಂಬಿ ಕೆಟ್ಟಿಲ್ಲ: ವಿ.ಎನ್ ಮಲ್ಲಿಕಾರ್ಜುನಸ್ವಾಮಿ

ಮೈಸೂರು: ಅಗ್ನಿ ಬನ್ನಿರಾಯ ಸಮುದಾಯದವರು ಯಾರೂ ಕೂಡ ಮಣ್ಣನ್ನು ನಂಬಿ ಕೆಟ್ಟಿಲ್ಲ. ಈ ಜಗತ್ತು ಪ್ರೀತಿಸುವಂತಹ ಅಗ್ನಿ ಸಮುದಾಯದವರಾಗಿಯೇ ಉತ್ತಮವಾಗಿ ಬೆಳೆಯುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ ಹೇಳಿದರು.

ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಶ್ರೀ ಅಗ್ನಿ ಬನ್ನಿರಾಯ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಕೃತದಲ್ಲಿ ಬನ್ನಿಯನ್ನು ವಹನಿ ಎಂದು ಕರೆಯುತ್ತಾರೆ. ಸಂಸ್ಕೃತದ ತದ್ಭವ ಅರ್ಥವಾಗಿದೆ. ಅಗ್ನಿ ಕುಲದಿಂದಲೇ ಅದರ ಸಂಕೇತವಾಗಿದೆ ಎಂದು ಹೇಳಿದರು.

ಪಾಂಡವರ ವನವಾಸದ ಸಂದರ್ಭದಲ್ಲಿ ಕೌರವರು ಕೊಟ್ಟ ಕಷ್ಟವನ್ನು ನೆನೆದು ಭೀಮ ಆ ಸಂದರ್ಭದಲ್ಲಿ ಅಗ್ನಿ ಪುತ್ರಿ ನೀನು, ನಾನು ವಾಯುಪುತ್ರ, ಬೆಂಕಿ ಗಾಳಿ ಎರಡು ಸೇರಿದರೆ ಈ ಕುರು ಕುಲದವರನ್ನು ಸುಟ್ಟು ಹಾಕದೇ ಬಿಡುವುದಿಲ್ಲ ಎಂದು ಭೀಮ ಹೇಳುತ್ತಾನೆ. ಇಂತಹ ವಂಶದ ಮೂಲ ಪುತ್ರರು ಅಗ್ನಿಬನ್ನಿರಾಯ ಎಂದು ತಿಳಿಸಿದರು.

ಸಂಶೋಧಕರಾದ ಮಧುಸೂದನ್ ಕೆ .ಆರ್ ಅವರು ಮಾತನಾಡಿ, ಅಗ್ನಿ ಬನ್ನಿರಾಯ ಜನಾಂಗದವರು ಸುಮಾರು 14 ಪಂಗಡಗಳನ್ನು ಒಳಗೊಂಡಿರುವ ಒಕ್ಕೂಟದ ಸಮಾಜ. ಈ ಒಂದು ಜನಾಂಗದಲ್ಲಿ ಇರುವವರು ಎಲ್ಲರೂ ಕೂಡ ಅಗ್ನಿಯ ಆರಾಧಕರು. ಅಗ್ನಿಯನ್ನೆ ಮೂಲವಾಗಿ ನಂಬಿಕೊಂಡು ಆರಾಧಿಸಿಕೊಂಡು ಬರುತ್ತಿರುವವರು ಎಂದು ಹೇಳಿದರು.

ನಮ್ಮ ಕರ್ನಾಟಕ ಭಾಗದಲ್ಲಿ ಅಗ್ನಿ ಬನ್ನಿರಾಯ ಎಂದು ಕರೆಯುತ್ತಾರೆ. ಅದೇ ತಮಿಳುನಾಡು ಭಾಗಗಳಲ್ಲಿ ವನ್ನಿ ಮಹಾರಾಜ ಎಂದು ಕರೆಯುತ್ತಾರೆ. ಆಂಧ್ರಪ್ರದೇಶದಲ್ಲೂ ಕೂಡ ವನ್ನಿ ಮಹಾರಾಜ ಎಂದು ಪೂಜಿಸುತ್ತಾರೆ. ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ

ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ…

2 hours ago

3 ಮಸೂದೆಗಳಿಗೆ ರಾಜ್ಯಪಾಲರ ನಕಾರ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…

3 hours ago

ಮೈಸೂರು | ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆಗೆ ಸಿದ್ಧತೆ

ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…

3 hours ago

ಮುಂದಿನ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೆ : ನಿಖಿಲ್ ಕುಮಾರಸ್ವಾಮಿ ಭರವಸೆ

ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…

7 hours ago

ಪ್ರತ್ಯೇಕವಾಗಿದ್ದ ದಂಪತಿ ನಡುವೆ ಕಿರಿಕ್ ; ಪತ್ನಿ ಕೊಲೆಯಲ್ಲಿ ಅಂತ್ಯ

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…

8 hours ago

ಸಿಎಂ ಕ್ಷೇತ್ರದಲ್ಲಿನ ಸಮಸ್ಯೆ ಬಗೆಹರಿಸಿ : ಅಧಿಕಾರಿಗಳಿಗೆ ಯತೀಂದ್ರ ಸೂಚನೆ

ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…

8 hours ago