ಮೈಸೂರು ನಗರ

ಯಾರೂ ಸಹ ಮಣ್ಣನ್ನು ನಂಬಿ ಕೆಟ್ಟಿಲ್ಲ: ವಿ.ಎನ್ ಮಲ್ಲಿಕಾರ್ಜುನಸ್ವಾಮಿ

ಮೈಸೂರು: ಅಗ್ನಿ ಬನ್ನಿರಾಯ ಸಮುದಾಯದವರು ಯಾರೂ ಕೂಡ ಮಣ್ಣನ್ನು ನಂಬಿ ಕೆಟ್ಟಿಲ್ಲ. ಈ ಜಗತ್ತು ಪ್ರೀತಿಸುವಂತಹ ಅಗ್ನಿ ಸಮುದಾಯದವರಾಗಿಯೇ ಉತ್ತಮವಾಗಿ ಬೆಳೆಯುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ ಹೇಳಿದರು.

ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಶ್ರೀ ಅಗ್ನಿ ಬನ್ನಿರಾಯ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಕೃತದಲ್ಲಿ ಬನ್ನಿಯನ್ನು ವಹನಿ ಎಂದು ಕರೆಯುತ್ತಾರೆ. ಸಂಸ್ಕೃತದ ತದ್ಭವ ಅರ್ಥವಾಗಿದೆ. ಅಗ್ನಿ ಕುಲದಿಂದಲೇ ಅದರ ಸಂಕೇತವಾಗಿದೆ ಎಂದು ಹೇಳಿದರು.

ಪಾಂಡವರ ವನವಾಸದ ಸಂದರ್ಭದಲ್ಲಿ ಕೌರವರು ಕೊಟ್ಟ ಕಷ್ಟವನ್ನು ನೆನೆದು ಭೀಮ ಆ ಸಂದರ್ಭದಲ್ಲಿ ಅಗ್ನಿ ಪುತ್ರಿ ನೀನು, ನಾನು ವಾಯುಪುತ್ರ, ಬೆಂಕಿ ಗಾಳಿ ಎರಡು ಸೇರಿದರೆ ಈ ಕುರು ಕುಲದವರನ್ನು ಸುಟ್ಟು ಹಾಕದೇ ಬಿಡುವುದಿಲ್ಲ ಎಂದು ಭೀಮ ಹೇಳುತ್ತಾನೆ. ಇಂತಹ ವಂಶದ ಮೂಲ ಪುತ್ರರು ಅಗ್ನಿಬನ್ನಿರಾಯ ಎಂದು ತಿಳಿಸಿದರು.

ಸಂಶೋಧಕರಾದ ಮಧುಸೂದನ್ ಕೆ .ಆರ್ ಅವರು ಮಾತನಾಡಿ, ಅಗ್ನಿ ಬನ್ನಿರಾಯ ಜನಾಂಗದವರು ಸುಮಾರು 14 ಪಂಗಡಗಳನ್ನು ಒಳಗೊಂಡಿರುವ ಒಕ್ಕೂಟದ ಸಮಾಜ. ಈ ಒಂದು ಜನಾಂಗದಲ್ಲಿ ಇರುವವರು ಎಲ್ಲರೂ ಕೂಡ ಅಗ್ನಿಯ ಆರಾಧಕರು. ಅಗ್ನಿಯನ್ನೆ ಮೂಲವಾಗಿ ನಂಬಿಕೊಂಡು ಆರಾಧಿಸಿಕೊಂಡು ಬರುತ್ತಿರುವವರು ಎಂದು ಹೇಳಿದರು.

ನಮ್ಮ ಕರ್ನಾಟಕ ಭಾಗದಲ್ಲಿ ಅಗ್ನಿ ಬನ್ನಿರಾಯ ಎಂದು ಕರೆಯುತ್ತಾರೆ. ಅದೇ ತಮಿಳುನಾಡು ಭಾಗಗಳಲ್ಲಿ ವನ್ನಿ ಮಹಾರಾಜ ಎಂದು ಕರೆಯುತ್ತಾರೆ. ಆಂಧ್ರಪ್ರದೇಶದಲ್ಲೂ ಕೂಡ ವನ್ನಿ ಮಹಾರಾಜ ಎಂದು ಪೂಜಿಸುತ್ತಾರೆ. ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

1 hour ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

5 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

21 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

22 hours ago