ಮೈಸೂರು ನಗರ

ಮೈಸೂರು ಪ್ರಧಾನ ಅಂಚೆ ಕಚೇರಿಯಲ್ಲಿ ಜೂನ್ 2 ಮತ್ತು 3ರಂದು ವಹಿವಾಟು ಇರಲ್ಲ

ಮೈಸೂರು: ಐಟಿ 2.0 ಅಡಿಯಲ್ಲಿ ಹೊಸ ತಂತ್ರಾಂಶವನ್ನು ಅಳವಡಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪ ಅಂಚೆ ಕಚೇರಿಗಳಲ್ಲಿ ಜೂನ್ 2 ಮತ್ತು 3 ರಂದು ಯಾವುದೇ ರೀತಿಯ ವಹಿವಾಟು ಇರುವುದಿಲ್ಲ ಎಂದು ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಜಿ.ಹರೀಶ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಬನ್ನಿಮಂಟಪ, ಚಾಮುಂಡಿ ಎಕ್ಸ್ ಟೆನ್ಷನ್, ಜಿ.ಎಸ್ ಆಶ್ರಮ, ಹೆಬ್ಬಾಳ್ ಲೇ ಔಟ್, ಜಯಲಕ್ಷ್ಮಿಪುರಂ, ಕೃಷ್ಣಮೂರ್ತಿಪುರಂ, ಮಾನಸಗಂಗೋತ್ರಿ, ಮಂಡಿ ಮೊಹಲ್ಲಾ, ಮೇಟಗಳ್ಳಿ, ಮೈಸೂರು ಫೋರ್ಟ್, ಮೈಸೂರು ಯುನಿವರ್ಸಿಟಿ, ನರಸಿಂಹರಾಜ ಮೊಹಲ್ಲಾ, ನೋಟ್ ಮುದ್ರಣ ನಗರ, ಪಿಟಿಸಿ ಕ್ಯಾಂಪಸ್, ಶಕ್ತಿ ನಗರ, ಶಿವರಾತ್ರೀಶ್ವನಗರ, ಸಿದ್ದಾರ್ಥನಗರ, ವಿಜಯನಗರ ಎರಡು ಮತ್ತು ಮೂರನೇ ಹಂತ, ಯಾದವಗಿರಿ, ಬಿಎನ್‌ಪಿಎಲ್ ಮತ್ತು ಬಿಪಿಸಿ ಅಂಚೆ ಕಚೇರಿಗಳು ಮೇಲ್ಕಂಡ ಎರಡು ದಿನಗಳ ಕಾಲ ವಹಿವಾಟು ನಡೆಸುವುದಿಲ್ಲ ಎಂದು ಹೇಳಿದ್ದಾರೆ.

ಸರಸ್ವತಿಪುರಂ ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಗ್ರಾಹಕರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

1 hour ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

2 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

3 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

4 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

4 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

6 hours ago