ಮೈಸೂರು ನಗರ

ಮೈಸೂರು ಪ್ರಧಾನ ಅಂಚೆ ಕಚೇರಿಯಲ್ಲಿ ಜೂನ್ 2 ಮತ್ತು 3ರಂದು ವಹಿವಾಟು ಇರಲ್ಲ

ಮೈಸೂರು: ಐಟಿ 2.0 ಅಡಿಯಲ್ಲಿ ಹೊಸ ತಂತ್ರಾಂಶವನ್ನು ಅಳವಡಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪ ಅಂಚೆ ಕಚೇರಿಗಳಲ್ಲಿ ಜೂನ್ 2 ಮತ್ತು 3 ರಂದು ಯಾವುದೇ ರೀತಿಯ ವಹಿವಾಟು ಇರುವುದಿಲ್ಲ ಎಂದು ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಜಿ.ಹರೀಶ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಬನ್ನಿಮಂಟಪ, ಚಾಮುಂಡಿ ಎಕ್ಸ್ ಟೆನ್ಷನ್, ಜಿ.ಎಸ್ ಆಶ್ರಮ, ಹೆಬ್ಬಾಳ್ ಲೇ ಔಟ್, ಜಯಲಕ್ಷ್ಮಿಪುರಂ, ಕೃಷ್ಣಮೂರ್ತಿಪುರಂ, ಮಾನಸಗಂಗೋತ್ರಿ, ಮಂಡಿ ಮೊಹಲ್ಲಾ, ಮೇಟಗಳ್ಳಿ, ಮೈಸೂರು ಫೋರ್ಟ್, ಮೈಸೂರು ಯುನಿವರ್ಸಿಟಿ, ನರಸಿಂಹರಾಜ ಮೊಹಲ್ಲಾ, ನೋಟ್ ಮುದ್ರಣ ನಗರ, ಪಿಟಿಸಿ ಕ್ಯಾಂಪಸ್, ಶಕ್ತಿ ನಗರ, ಶಿವರಾತ್ರೀಶ್ವನಗರ, ಸಿದ್ದಾರ್ಥನಗರ, ವಿಜಯನಗರ ಎರಡು ಮತ್ತು ಮೂರನೇ ಹಂತ, ಯಾದವಗಿರಿ, ಬಿಎನ್‌ಪಿಎಲ್ ಮತ್ತು ಬಿಪಿಸಿ ಅಂಚೆ ಕಚೇರಿಗಳು ಮೇಲ್ಕಂಡ ಎರಡು ದಿನಗಳ ಕಾಲ ವಹಿವಾಟು ನಡೆಸುವುದಿಲ್ಲ ಎಂದು ಹೇಳಿದ್ದಾರೆ.

ಸರಸ್ವತಿಪುರಂ ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಗ್ರಾಹಕರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

15 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

15 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

15 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

15 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

15 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

15 hours ago