ಮೈಸೂರು ನಗರ

ರಾಜ್ಯ ಕಾಂಗ್ರೆಸ್‌ನಲ್ಲಿ ನಂಬರ್ ಗೇಮ್ ನಡೆಯುತ್ತಿದೆ: ಛಲವಾದಿ ನಾರಾಯಣಸ್ವಾಮಿ

ಮೈಸೂರು: ಇಷ್ಟು ದಿನ ಬೇರೆ ಪಕ್ಷದ ಶಾಸಕರ ಜೊತೆಗೂಡಿ ಸಮ್ಮಿಶ್ರ ಸರ್ಕಾರ ನಡೆಸುವುದನ್ನು ನೋಡಿದ್ದೆವು. ಆದರೆ ಈಗ ಒಂದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರದಂತೆ ಆಡಳಿತ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಲೇವಡಿ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಕಾಂಗ್ರೆಸ್ ನಲ್ಲಿ A, B, C ಎಂದು ಮೂರು ಗ್ರೂಪ್ ಇದೆ. A ಗ್ರೂಪ್‌ನಿಂದ Bನ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದೀಗ C ಗ್ರೂಪ್ ಬೇರೆ ಸೃಷ್ಟಿಯಾಗಿದೆ. ಒಬ್ಬರಿಗೆ 15-20 ಇದ್ದ ಸಂಖ್ಯೆ ಈಗ 65ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ಒಬ್ಬ ಶಾಸಕರಿಗೆ 50 ರಿಂದ ಶುರು ಆಗಿದೆಯಂತೆ. ಮುಂದೆ ಇದು ಎಷ್ಟಕ್ಕೆ ಹೋಗಿ ನಿಲ್ಲುತ್ತೆ ಗೊತ್ತಿಲ್ಲ. ಶಾಸಕರನ್ನು ಖರೀದಿಸುವ ಕೆಲಸ ಸೃಷ್ಟಿಯಾಗಿದೆ. ಆದರೆ ರೈತರ ಬೆಳೆ ಖರೀದಿಸುವ ಕೇಂದ್ರವಿಲ್ಲ, ಇದು ಬೇಸರದ ಸಂಗತಿ. ಶಾಸಕರನ್ನು ಖರೀದಿಸುವ ಕೇಂದ್ರ ದೆಹಲಿಯಲ್ಲಿಲ್ಲ ಬೆಂಗಳೂರಿನಲ್ಲಿದೆ. ಏಕೆಂದರೆ ಕಾಂಗ್ರೆಸ್ ಹೈಕಮಾಂಡ್ ಡೆಡ್ ಆಗಿದೆ. ಇಷ್ಟು ದಿನ ಬೇರೆ ಪಕ್ಷದ ಶಾಸಕರ ಜೊತೆಗೂಡಿ ಸಮ್ಮಿಶ್ರ ಸರ್ಕಾರ ನಡೆಸುವುದನ್ನು ನೋಡಿದ್ದೆವು. ಈಗ ಒಂದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರದಂತೆ ಆಡಳಿತ ನಡೆಸಲಾಗುತ್ತಿದೆ ಎಂದು ಲೇವಡಿ ಮಾಡಿದರು.

ಇದನ್ನು ಓದಿ: ಅಯೋಧ್ಯೆ ರಾಮಮಂದಿರದ ಗೋಪುರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಇನ್ನು ರಾಜ್ಯ ಕಾಂಗ್ರೆಸ್ ದಲಿತ ನಾಯಕರು ಶುಗರ್ ಲೆಸ್ ಇದ್ದ ಹಾಗೆ ಎಂದು ವ್ಯಂಗ್ಯವಾಡಿದ ಅವರು, ದಲಿತ ನಾಯಕರು ಅಧಿಕಾರ ವಂಚಿತರಾಗಿರುವುದು ಸಿದ್ದರಾಮಯ್ಯನ ತಾಕತ್ತಿನಿಂದ.

ದಲಿತ ನಾಯಕರ ಪರಿಸ್ಥಿತಿ ಶುಗರ್ ಲೆಸ್, ಪವರ್ ಲೆಸ್ ತರ ಆಗಿದೆ. ಕಳೆದ 2013ರಲ್ಲೇ ಜಿ ಪರಮೇಶ್ವರ್ ಸಿಎಂ ಆಗಬೇಕಿತ್ತು. ಆದರೆ ಸಿದ್ದರಾಮಯ್ಯ ಅವರ ಕ್ಷೇತ್ರವನ್ನೇ ಮುಗಿಸಿಬಿಟ್ಟರು ಎಂದು ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಆಕ್ರೋಶ ಹೊರಹಾಕಿದರು.

ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಸ ಹೊಡೆಯಲು ಅಧ್ಯಕ್ಷರಾಗಿದ್ದಾರಾ? ಎಂದು ವ್ಯಂಗ್ಯವಾಡಿದ ಅವರು, ಖರ್ಗೆ ನನ್ನ ಕೈಯಲ್ಲಿ ಏನು ಇಲ್ಲ, ಹೈಕಮಾಂಡ್ ನಿರ್ಧರಿಸುತ್ತೆ ಎನ್ನುತ್ತಾರೆ. ಹಾಗಾದರೆ ನೀವೇನು ಕಸ ಹೊಡೆಯಲು AICC ಅಧ್ಯಕ್ಷರಾಗಿದ್ದೀರಾ? ಕಾಂಗ್ರೆಸ್‌ನ ಕೊನೆಯ ಮೊಳೆ ಹೊಡೆಯಲು ಖರ್ಗೆಗೆ ಅಧಿಕಾರ ನೀಡಿದ್ದಾರಾ.? ಮುಳುಗುತ್ತಿರುವ ಕಾಂಗ್ರೆಸ್‌ಗೆ ದಲಿತರಿಗೆ ಅಧಿಕಾರ ಕೊಟ್ಟು, ದಲಿತರಿಂದ ಕಾಂಗ್ರೆಸ್ ಮುಳುಗಿತ್ತು ಎಂದು ಹೇಳಿ ದಲಿತರಿಗೆ ಕೆಟ್ಟ ಹೆಸರು ತರಲು ಮುಂದಾಗಿದ್ದೀರಾ? ಎಂದು ಪ್ರಶ್ನೆ ಮೇಲೆ ಪ್ರಶ್ನೆ ಹಾಕಿದರು.

ಆಂದೋಲನ ಡೆಸ್ಕ್

Recent Posts

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

13 mins ago

‘ಬಿಗ್ ಬಾಸ್’ ಗಿಲ್ಲಿಗೆ ಸಿಎಂ ಅಭಿನಂದನೆ!

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…

19 mins ago

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…

30 mins ago

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

1 hour ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

1 hour ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

2 hours ago