ಮೈಸೂರು ನಗರ

ರಾಜ್ಯ ಕಾಂಗ್ರೆಸ್‌ನಲ್ಲಿ ನಂಬರ್ ಗೇಮ್ ನಡೆಯುತ್ತಿದೆ: ಛಲವಾದಿ ನಾರಾಯಣಸ್ವಾಮಿ

ಮೈಸೂರು: ಇಷ್ಟು ದಿನ ಬೇರೆ ಪಕ್ಷದ ಶಾಸಕರ ಜೊತೆಗೂಡಿ ಸಮ್ಮಿಶ್ರ ಸರ್ಕಾರ ನಡೆಸುವುದನ್ನು ನೋಡಿದ್ದೆವು. ಆದರೆ ಈಗ ಒಂದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರದಂತೆ ಆಡಳಿತ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಲೇವಡಿ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಕಾಂಗ್ರೆಸ್ ನಲ್ಲಿ A, B, C ಎಂದು ಮೂರು ಗ್ರೂಪ್ ಇದೆ. A ಗ್ರೂಪ್‌ನಿಂದ Bನ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದೀಗ C ಗ್ರೂಪ್ ಬೇರೆ ಸೃಷ್ಟಿಯಾಗಿದೆ. ಒಬ್ಬರಿಗೆ 15-20 ಇದ್ದ ಸಂಖ್ಯೆ ಈಗ 65ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ಒಬ್ಬ ಶಾಸಕರಿಗೆ 50 ರಿಂದ ಶುರು ಆಗಿದೆಯಂತೆ. ಮುಂದೆ ಇದು ಎಷ್ಟಕ್ಕೆ ಹೋಗಿ ನಿಲ್ಲುತ್ತೆ ಗೊತ್ತಿಲ್ಲ. ಶಾಸಕರನ್ನು ಖರೀದಿಸುವ ಕೆಲಸ ಸೃಷ್ಟಿಯಾಗಿದೆ. ಆದರೆ ರೈತರ ಬೆಳೆ ಖರೀದಿಸುವ ಕೇಂದ್ರವಿಲ್ಲ, ಇದು ಬೇಸರದ ಸಂಗತಿ. ಶಾಸಕರನ್ನು ಖರೀದಿಸುವ ಕೇಂದ್ರ ದೆಹಲಿಯಲ್ಲಿಲ್ಲ ಬೆಂಗಳೂರಿನಲ್ಲಿದೆ. ಏಕೆಂದರೆ ಕಾಂಗ್ರೆಸ್ ಹೈಕಮಾಂಡ್ ಡೆಡ್ ಆಗಿದೆ. ಇಷ್ಟು ದಿನ ಬೇರೆ ಪಕ್ಷದ ಶಾಸಕರ ಜೊತೆಗೂಡಿ ಸಮ್ಮಿಶ್ರ ಸರ್ಕಾರ ನಡೆಸುವುದನ್ನು ನೋಡಿದ್ದೆವು. ಈಗ ಒಂದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರದಂತೆ ಆಡಳಿತ ನಡೆಸಲಾಗುತ್ತಿದೆ ಎಂದು ಲೇವಡಿ ಮಾಡಿದರು.

ಇದನ್ನು ಓದಿ: ಅಯೋಧ್ಯೆ ರಾಮಮಂದಿರದ ಗೋಪುರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಇನ್ನು ರಾಜ್ಯ ಕಾಂಗ್ರೆಸ್ ದಲಿತ ನಾಯಕರು ಶುಗರ್ ಲೆಸ್ ಇದ್ದ ಹಾಗೆ ಎಂದು ವ್ಯಂಗ್ಯವಾಡಿದ ಅವರು, ದಲಿತ ನಾಯಕರು ಅಧಿಕಾರ ವಂಚಿತರಾಗಿರುವುದು ಸಿದ್ದರಾಮಯ್ಯನ ತಾಕತ್ತಿನಿಂದ.

ದಲಿತ ನಾಯಕರ ಪರಿಸ್ಥಿತಿ ಶುಗರ್ ಲೆಸ್, ಪವರ್ ಲೆಸ್ ತರ ಆಗಿದೆ. ಕಳೆದ 2013ರಲ್ಲೇ ಜಿ ಪರಮೇಶ್ವರ್ ಸಿಎಂ ಆಗಬೇಕಿತ್ತು. ಆದರೆ ಸಿದ್ದರಾಮಯ್ಯ ಅವರ ಕ್ಷೇತ್ರವನ್ನೇ ಮುಗಿಸಿಬಿಟ್ಟರು ಎಂದು ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಆಕ್ರೋಶ ಹೊರಹಾಕಿದರು.

ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಸ ಹೊಡೆಯಲು ಅಧ್ಯಕ್ಷರಾಗಿದ್ದಾರಾ? ಎಂದು ವ್ಯಂಗ್ಯವಾಡಿದ ಅವರು, ಖರ್ಗೆ ನನ್ನ ಕೈಯಲ್ಲಿ ಏನು ಇಲ್ಲ, ಹೈಕಮಾಂಡ್ ನಿರ್ಧರಿಸುತ್ತೆ ಎನ್ನುತ್ತಾರೆ. ಹಾಗಾದರೆ ನೀವೇನು ಕಸ ಹೊಡೆಯಲು AICC ಅಧ್ಯಕ್ಷರಾಗಿದ್ದೀರಾ? ಕಾಂಗ್ರೆಸ್‌ನ ಕೊನೆಯ ಮೊಳೆ ಹೊಡೆಯಲು ಖರ್ಗೆಗೆ ಅಧಿಕಾರ ನೀಡಿದ್ದಾರಾ.? ಮುಳುಗುತ್ತಿರುವ ಕಾಂಗ್ರೆಸ್‌ಗೆ ದಲಿತರಿಗೆ ಅಧಿಕಾರ ಕೊಟ್ಟು, ದಲಿತರಿಂದ ಕಾಂಗ್ರೆಸ್ ಮುಳುಗಿತ್ತು ಎಂದು ಹೇಳಿ ದಲಿತರಿಗೆ ಕೆಟ್ಟ ಹೆಸರು ತರಲು ಮುಂದಾಗಿದ್ದೀರಾ? ಎಂದು ಪ್ರಶ್ನೆ ಮೇಲೆ ಪ್ರಶ್ನೆ ಹಾಕಿದರು.

ಆಂದೋಲನ ಡೆಸ್ಕ್

Recent Posts

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

60 mins ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

2 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

2 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

3 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

4 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

4 hours ago