ಮೈಸೂರು ನಗರ

ರಾಜ್ಯ ಕಾಂಗ್ರೆಸ್‌ನಲ್ಲಿ ನಂಬರ್ ಗೇಮ್ ನಡೆಯುತ್ತಿದೆ: ಛಲವಾದಿ ನಾರಾಯಣಸ್ವಾಮಿ

ಮೈಸೂರು: ಇಷ್ಟು ದಿನ ಬೇರೆ ಪಕ್ಷದ ಶಾಸಕರ ಜೊತೆಗೂಡಿ ಸಮ್ಮಿಶ್ರ ಸರ್ಕಾರ ನಡೆಸುವುದನ್ನು ನೋಡಿದ್ದೆವು. ಆದರೆ ಈಗ ಒಂದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರದಂತೆ ಆಡಳಿತ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಲೇವಡಿ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಕಾಂಗ್ರೆಸ್ ನಲ್ಲಿ A, B, C ಎಂದು ಮೂರು ಗ್ರೂಪ್ ಇದೆ. A ಗ್ರೂಪ್‌ನಿಂದ Bನ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದೀಗ C ಗ್ರೂಪ್ ಬೇರೆ ಸೃಷ್ಟಿಯಾಗಿದೆ. ಒಬ್ಬರಿಗೆ 15-20 ಇದ್ದ ಸಂಖ್ಯೆ ಈಗ 65ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ಒಬ್ಬ ಶಾಸಕರಿಗೆ 50 ರಿಂದ ಶುರು ಆಗಿದೆಯಂತೆ. ಮುಂದೆ ಇದು ಎಷ್ಟಕ್ಕೆ ಹೋಗಿ ನಿಲ್ಲುತ್ತೆ ಗೊತ್ತಿಲ್ಲ. ಶಾಸಕರನ್ನು ಖರೀದಿಸುವ ಕೆಲಸ ಸೃಷ್ಟಿಯಾಗಿದೆ. ಆದರೆ ರೈತರ ಬೆಳೆ ಖರೀದಿಸುವ ಕೇಂದ್ರವಿಲ್ಲ, ಇದು ಬೇಸರದ ಸಂಗತಿ. ಶಾಸಕರನ್ನು ಖರೀದಿಸುವ ಕೇಂದ್ರ ದೆಹಲಿಯಲ್ಲಿಲ್ಲ ಬೆಂಗಳೂರಿನಲ್ಲಿದೆ. ಏಕೆಂದರೆ ಕಾಂಗ್ರೆಸ್ ಹೈಕಮಾಂಡ್ ಡೆಡ್ ಆಗಿದೆ. ಇಷ್ಟು ದಿನ ಬೇರೆ ಪಕ್ಷದ ಶಾಸಕರ ಜೊತೆಗೂಡಿ ಸಮ್ಮಿಶ್ರ ಸರ್ಕಾರ ನಡೆಸುವುದನ್ನು ನೋಡಿದ್ದೆವು. ಈಗ ಒಂದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರದಂತೆ ಆಡಳಿತ ನಡೆಸಲಾಗುತ್ತಿದೆ ಎಂದು ಲೇವಡಿ ಮಾಡಿದರು.

ಇದನ್ನು ಓದಿ: ಅಯೋಧ್ಯೆ ರಾಮಮಂದಿರದ ಗೋಪುರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಇನ್ನು ರಾಜ್ಯ ಕಾಂಗ್ರೆಸ್ ದಲಿತ ನಾಯಕರು ಶುಗರ್ ಲೆಸ್ ಇದ್ದ ಹಾಗೆ ಎಂದು ವ್ಯಂಗ್ಯವಾಡಿದ ಅವರು, ದಲಿತ ನಾಯಕರು ಅಧಿಕಾರ ವಂಚಿತರಾಗಿರುವುದು ಸಿದ್ದರಾಮಯ್ಯನ ತಾಕತ್ತಿನಿಂದ.

ದಲಿತ ನಾಯಕರ ಪರಿಸ್ಥಿತಿ ಶುಗರ್ ಲೆಸ್, ಪವರ್ ಲೆಸ್ ತರ ಆಗಿದೆ. ಕಳೆದ 2013ರಲ್ಲೇ ಜಿ ಪರಮೇಶ್ವರ್ ಸಿಎಂ ಆಗಬೇಕಿತ್ತು. ಆದರೆ ಸಿದ್ದರಾಮಯ್ಯ ಅವರ ಕ್ಷೇತ್ರವನ್ನೇ ಮುಗಿಸಿಬಿಟ್ಟರು ಎಂದು ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಆಕ್ರೋಶ ಹೊರಹಾಕಿದರು.

ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಸ ಹೊಡೆಯಲು ಅಧ್ಯಕ್ಷರಾಗಿದ್ದಾರಾ? ಎಂದು ವ್ಯಂಗ್ಯವಾಡಿದ ಅವರು, ಖರ್ಗೆ ನನ್ನ ಕೈಯಲ್ಲಿ ಏನು ಇಲ್ಲ, ಹೈಕಮಾಂಡ್ ನಿರ್ಧರಿಸುತ್ತೆ ಎನ್ನುತ್ತಾರೆ. ಹಾಗಾದರೆ ನೀವೇನು ಕಸ ಹೊಡೆಯಲು AICC ಅಧ್ಯಕ್ಷರಾಗಿದ್ದೀರಾ? ಕಾಂಗ್ರೆಸ್‌ನ ಕೊನೆಯ ಮೊಳೆ ಹೊಡೆಯಲು ಖರ್ಗೆಗೆ ಅಧಿಕಾರ ನೀಡಿದ್ದಾರಾ.? ಮುಳುಗುತ್ತಿರುವ ಕಾಂಗ್ರೆಸ್‌ಗೆ ದಲಿತರಿಗೆ ಅಧಿಕಾರ ಕೊಟ್ಟು, ದಲಿತರಿಂದ ಕಾಂಗ್ರೆಸ್ ಮುಳುಗಿತ್ತು ಎಂದು ಹೇಳಿ ದಲಿತರಿಗೆ ಕೆಟ್ಟ ಹೆಸರು ತರಲು ಮುಂದಾಗಿದ್ದೀರಾ? ಎಂದು ಪ್ರಶ್ನೆ ಮೇಲೆ ಪ್ರಶ್ನೆ ಹಾಕಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

34 mins ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

7 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

7 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

7 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

7 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

7 hours ago