ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೇಲ್ ಸೇತುವೆ, ಸುರಂಗ ಮಾರ್ಗ ನಿರ್ಮಾಣ ಹಾಗೂ ಗ್ರೇಟರ್ ಮೈಸೂರು ಯೋಜನೆ ಸೂಕ್ತವಲ್ಲ ಎಂದು ಮೈಸೂರು ರಕ್ಷಣಾ ವೇದಿಕೆ ವಿರೋಧ ವ್ಯಕ್ತಪಡಿಸಿದೆ.
ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರಿಂದ ಮೈಸೂರು ರಾಜ್ಯದ ಅಭಿವೃದ್ಧಿ ಪ್ರಾರಂಭವಾಗಿ ಬಹಳಷ್ಟು ದಿವಾನರು, ದಕ್ಷ ಅಧಿಕಾರಿಗಳು ಅದಕ್ಕಾಗಿ ಶ್ರಮಿಸಿದ್ದಾರೆ. ಇಂತಹ ಪಾರಂಪರಿಕ ನಗರಕ್ಕೆ ಗ್ರೇಟರ್ ಮೈಸೂರು ಎಂದು ಹೆಸರು ಬದಲಿಸ ಹೊರಟಿರುವುದು ಸರಿಯಲ್ಲ ಎಂದು ವೇದಿಕೆಯ ಅಧ್ಯಕ್ಷ ಮೈ.ಕಾ.ಪ್ರೇಮ್ಕುಮಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಇದನ್ನು ಓದಿ: ಗ್ರೇಟರ್ ಮೈಸೂರು ರಚನೆಗೆ ಮರುಜೀವ
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೂ ಮೇಲ್ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರ ಉಲ್ಲೇಖಿಸಿರುವ ವಿನೋಬಾ ರಸ್ತೆ, ಜೆಎಲ್ಬಿ ರಸ್ತೆಗಳಲ್ಲಿ ಪಾರಂಪರಿಕ ಕಟ್ಟಡಗಳಿದ್ದು, ಭೂಗತ ನೀರಿನ ಪೈಪ್ಲೈನ್ ಸಹ ಹಾದು ಹೋಗಿದೆ. ಹೀಗಾಗಿ ಇಲ್ಲಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವುದು ಸೂಕ್ತವಲ್ಲ ಎಂದು ತಿಳಿಸಿದರು.
ನಗರದಲ್ಲಿ ಕುಡಿಯುವ ನೀರು, ಒಳ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಕಸದ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ. ಪಾದಚಾರಿ ಮಾರ್ಗಗಳ ಒತ್ತುವರಿಯಾಗಿದೆ. ರಸ್ತೆಗಳು ಹದಗೆಟ್ಟಿವೆ. ಹೀಗಾಗಿ ಇಂತಹ ಸಮಸ್ಯೆಗಳನ್ನು ಬಗೆಹರಿಸುವತ್ತ ಸರ್ಕಾರ ಕೂಡಲೇ ಗಮನಹರಿಸಬೇಕು ಎಂದು ಆಗ್ರಹಿಸಿದರು.
ವೇದಿಕೆಯ ಮುಖಂಡರಾದ ಕುಮಾರಗೌಡ, ಗುರುರಾಜ್, ಸಂಜಯ್, ಪ್ರಮೋದ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…
ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…
ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…
ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…
ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…