ಮೈಸೂರು ನಗರ

ಗ್ರೇಟರ್‌ ಮೈಸೂರು ಯೋಜನೆ ನಿರ್ಮಾಣಕ್ಕೆ ಆಕ್ಷೇಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೇಲ್ ಸೇತುವೆ, ಸುರಂಗ ಮಾರ್ಗ ನಿರ್ಮಾಣ ಹಾಗೂ ಗ್ರೇಟರ್ ಮೈಸೂರು ಯೋಜನೆ ಸೂಕ್ತವಲ್ಲ ಎಂದು ಮೈಸೂರು ರಕ್ಷಣಾ ವೇದಿಕೆ ವಿರೋಧ ವ್ಯಕ್ತಪಡಿಸಿದೆ.

ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರಿಂದ ಮೈಸೂರು ರಾಜ್ಯದ ಅಭಿವೃದ್ಧಿ ಪ್ರಾರಂಭವಾಗಿ ಬಹಳಷ್ಟು ದಿವಾನರು, ದಕ್ಷ ಅಧಿಕಾರಿಗಳು ಅದಕ್ಕಾಗಿ ಶ್ರಮಿಸಿದ್ದಾರೆ. ಇಂತಹ ಪಾರಂಪರಿಕ ನಗರಕ್ಕೆ ಗ್ರೇಟರ್ ಮೈಸೂರು ಎಂದು ಹೆಸರು ಬದಲಿಸ ಹೊರಟಿರುವುದು ಸರಿಯಲ್ಲ ಎಂದು ವೇದಿಕೆಯ ಅಧ್ಯಕ್ಷ ಮೈ.ಕಾ.ಪ್ರೇಮ್‌ಕುಮಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇದನ್ನು ಓದಿ: ಗ್ರೇಟರ್ ಮೈಸೂರು ರಚನೆಗೆ ಮರುಜೀವ

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೂ ಮೇಲ್ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರ ಉಲ್ಲೇಖಿಸಿರುವ ವಿನೋಬಾ ರಸ್ತೆ, ಜೆಎಲ್‌ಬಿ ರಸ್ತೆಗಳಲ್ಲಿ ಪಾರಂಪರಿಕ ಕಟ್ಟಡಗಳಿದ್ದು, ಭೂಗತ ನೀರಿನ ಪೈಪ್‌ಲೈನ್ ಸಹ ಹಾದು ಹೋಗಿದೆ. ಹೀಗಾಗಿ ಇಲ್ಲಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವುದು ಸೂಕ್ತವಲ್ಲ ಎಂದು ತಿಳಿಸಿದರು.

ನಗರದಲ್ಲಿ ಕುಡಿಯುವ ನೀರು, ಒಳ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಕಸದ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ. ಪಾದಚಾರಿ ಮಾರ್ಗಗಳ ಒತ್ತುವರಿಯಾಗಿದೆ. ರಸ್ತೆಗಳು ಹದಗೆಟ್ಟಿವೆ. ಹೀಗಾಗಿ ಇಂತಹ ಸಮಸ್ಯೆಗಳನ್ನು ಬಗೆಹರಿಸುವತ್ತ ಸರ್ಕಾರ ಕೂಡಲೇ ಗಮನಹರಿಸಬೇಕು ಎಂದು ಆಗ್ರಹಿಸಿದರು.

ವೇದಿಕೆಯ ಮುಖಂಡರಾದ ಕುಮಾರಗೌಡ, ಗುರುರಾಜ್, ಸಂಜಯ್, ಪ್ರಮೋದ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

15 mins ago

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

21 mins ago

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

39 mins ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

1 hour ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

2 hours ago

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…

2 hours ago