ಮೈಸೂರು: ಸ್ವದೇಶ್ ದರ್ಶನ್ ಯೋಜನೆಯಡಿ ಮೈಸೂರಿನ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದು, ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಈ ಯೋಜನೆಯಡಿ ಮೈಸೂರು ಸೇರಿದಂತೆ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 70 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಸ್ವದೇಶ್ ದರ್ಶನ್ ಯೋಜನೆಯಡಿ ಮೊದಲ ಹಂತದಲ್ಲಿ ಟಾಂಗಾ ರೈಡ್ ಹಾಗೂ ಎಕೋಲಜಿಕಲ್ ಎಕ್ಸ್ಪಿರಿನ್ಸ್ ವಲಯಕ್ಕೆ 21.17 ಕೋಟಿ ರೂ ಅನುದಾನಕ್ಕೆ ಡಿಪಿಆರ್ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಎರಡನೇ ಹಂತದಲ್ಲಿ ಮೈಸೂರಿನ ಹೃದಯ ಭಾಗದಲ್ಲಿರುವ ಹಳೆಯ ಪಾರಂಪರಿಕ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯವಾಗಿ ಅಭಿವೃದ್ಧಿ ಮಾಡಲು ಮೈಸೂರು ರಾಜರು, ದಿವಾನರು, ಆಡಳಿತಗಾರರು ನೀಡಿರುವ ಆಡಳಿತ ಸುಧಾರಣೆ, ಕೊಡುಗೆಗಳು ಹಾಗೂ ಮೈಸೂರು ಗತವೈಭವ ಹಾಗೂ ಪರಂಪರೆ ಬಿಂಬಿಸುವ ರೀತಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಸೂಚನೆ ನೀಡಿದ್ದಾರೆ.
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…
ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್ಗೆ ತಿಳಿಸಿದ್ದಾರೆ. ಸದಸ್ಯ ಜಗದೇವ್…
ಶಿವಮೊಗ್ಗ : ಬಿಜೆಪಿ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಎಎಸ್ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು…
ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ…
ಮೈಸೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಕೂಡಲೇ ಎಫ್.ಐ.ಆರ್ ದಾಖಲಿಸಿ ಸೂಕ್ತ…