ಮೈಸೂರು: ಸ್ವದೇಶ್ ದರ್ಶನ್ ಯೋಜನೆಯಡಿ ಮೈಸೂರಿನ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದು, ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಈ ಯೋಜನೆಯಡಿ ಮೈಸೂರು ಸೇರಿದಂತೆ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 70 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಸ್ವದೇಶ್ ದರ್ಶನ್ ಯೋಜನೆಯಡಿ ಮೊದಲ ಹಂತದಲ್ಲಿ ಟಾಂಗಾ ರೈಡ್ ಹಾಗೂ ಎಕೋಲಜಿಕಲ್ ಎಕ್ಸ್ಪಿರಿನ್ಸ್ ವಲಯಕ್ಕೆ 21.17 ಕೋಟಿ ರೂ ಅನುದಾನಕ್ಕೆ ಡಿಪಿಆರ್ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಎರಡನೇ ಹಂತದಲ್ಲಿ ಮೈಸೂರಿನ ಹೃದಯ ಭಾಗದಲ್ಲಿರುವ ಹಳೆಯ ಪಾರಂಪರಿಕ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯವಾಗಿ ಅಭಿವೃದ್ಧಿ ಮಾಡಲು ಮೈಸೂರು ರಾಜರು, ದಿವಾನರು, ಆಡಳಿತಗಾರರು ನೀಡಿರುವ ಆಡಳಿತ ಸುಧಾರಣೆ, ಕೊಡುಗೆಗಳು ಹಾಗೂ ಮೈಸೂರು ಗತವೈಭವ ಹಾಗೂ ಪರಂಪರೆ ಬಿಂಬಿಸುವ ರೀತಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಸೂಚನೆ ನೀಡಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…