ಮೈಸೂರು: ಇಲ್ಲಿನ ಅಶೋಕಪುರಂ ಬಳಿ ಇರುವ ಸಿಲ್ಕ್ ಫ್ಯಾಕ್ಟರಿಯಲ್ಲಿ 400ಕ್ಕೂ ಹೆಚ್ಚು ಕಾರ್ಮಿಕರು ಕೆಲಸವಿಲ್ಲದೇ ಗೇಟ್ ಬಳಿಯೇ ನಿಂತಿದ್ದು, ಅಧಿಕಾರಿಗಳು ಟೆಂಡರ್ ಬದಲಾವಣೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೊರಗುತ್ತಿಗೆಯಲ್ಲಿ ಕೆಲಸ ಮಾಡುವವರಿಗೆ ಇಂದು ಕೆಲಸಕ್ಕೆ ಬಾರದಂತೆ ರಜೆ ಘೋಷಣೆ ಮಾಡಲಾಗಿದ್ದು, ಕಾರ್ಮಿಕರು ಗ್ರ್ಯಾಜುಯಿಟಿ, ಸರ್ವೀಸ್ ಬ್ರೇಕ್ ಆಗುವ ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ 150ಕ್ಕೂ ಹೆಚ್ಚು ಪುರುಷ ಹಾಗೂ 200ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರಿಗೆ ಆತಂಕ ಎದುರಾಗಿದೆ. ನಾಳೆಯಿಂದ ಮತ್ತೆ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳು ಹೇಳುತ್ತಿದ್ದು, ಕಾರ್ಮಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಒಬ್ಬ ವ್ಯಕ್ತಿಗೆ ಟೆಂಡರ್ ನೀಡಲಾಗಿದ್ದು, ಇದೀಗ ಹೊಸ ಟೆಂಡರ್ ಬಂದಾಗ ಸಂಬಳದಲ್ಲಿ ಏರುಪೇರಾಗುವ ಸಾಧ್ಯತೆ ಎದುರಾಗಿದೆ.
ಇನ್ನು ಕಾರ್ಮಿಕರು ಗೇಟ್ ಬಳಿಯೇ ನಿಂತಿದ್ದ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಅಧಿಕಾರಿಗಳೊಂದಿಗೆ ಚರ್ಚಿಸಿ ನಾಳೆಯಿಂದ ಕೆಲಸ ನೀಡುವಂತೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಶಾಸಕರು, ಒಂದು ದಿನದ ರಜೆಯಿಂದ ಗ್ರ್ಯಾಜುಯಿಟಿಗೆ ತೊಂದರೆಯಗದಂತೆ ಸಿಎಂ ಬಳಿ ಮನವಿ ಮಾಡುತ್ತೇನೆ. ಯಾರನ್ನು ಕೆಲಸದಿಂದ ತೆಗೆಯಲು ಬಿಡುವುದಿಲ್ಲ. ಇಂದೇ ಸಿಎಂ ಭೇಟಿಯಾಗಿ ಅವರ ಮುಂದೆ ಈ ಸಮಸ್ಯೆ ಮುಂದಿಡುತ್ತೇನೆ ಎಂದು ಹೇಳಿದ್ದಾರೆ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…