ಮೈಸೂರು: ಇಲ್ಲಿನ ಅಶೋಕಪುರಂ ಬಳಿ ಇರುವ ಸಿಲ್ಕ್ ಫ್ಯಾಕ್ಟರಿಯಲ್ಲಿ 400ಕ್ಕೂ ಹೆಚ್ಚು ಕಾರ್ಮಿಕರು ಕೆಲಸವಿಲ್ಲದೇ ಗೇಟ್ ಬಳಿಯೇ ನಿಂತಿದ್ದು, ಅಧಿಕಾರಿಗಳು ಟೆಂಡರ್ ಬದಲಾವಣೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೊರಗುತ್ತಿಗೆಯಲ್ಲಿ ಕೆಲಸ ಮಾಡುವವರಿಗೆ ಇಂದು ಕೆಲಸಕ್ಕೆ ಬಾರದಂತೆ ರಜೆ ಘೋಷಣೆ ಮಾಡಲಾಗಿದ್ದು, ಕಾರ್ಮಿಕರು ಗ್ರ್ಯಾಜುಯಿಟಿ, ಸರ್ವೀಸ್ ಬ್ರೇಕ್ ಆಗುವ ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ 150ಕ್ಕೂ ಹೆಚ್ಚು ಪುರುಷ ಹಾಗೂ 200ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರಿಗೆ ಆತಂಕ ಎದುರಾಗಿದೆ. ನಾಳೆಯಿಂದ ಮತ್ತೆ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳು ಹೇಳುತ್ತಿದ್ದು, ಕಾರ್ಮಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಒಬ್ಬ ವ್ಯಕ್ತಿಗೆ ಟೆಂಡರ್ ನೀಡಲಾಗಿದ್ದು, ಇದೀಗ ಹೊಸ ಟೆಂಡರ್ ಬಂದಾಗ ಸಂಬಳದಲ್ಲಿ ಏರುಪೇರಾಗುವ ಸಾಧ್ಯತೆ ಎದುರಾಗಿದೆ.
ಇನ್ನು ಕಾರ್ಮಿಕರು ಗೇಟ್ ಬಳಿಯೇ ನಿಂತಿದ್ದ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಅಧಿಕಾರಿಗಳೊಂದಿಗೆ ಚರ್ಚಿಸಿ ನಾಳೆಯಿಂದ ಕೆಲಸ ನೀಡುವಂತೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಶಾಸಕರು, ಒಂದು ದಿನದ ರಜೆಯಿಂದ ಗ್ರ್ಯಾಜುಯಿಟಿಗೆ ತೊಂದರೆಯಗದಂತೆ ಸಿಎಂ ಬಳಿ ಮನವಿ ಮಾಡುತ್ತೇನೆ. ಯಾರನ್ನು ಕೆಲಸದಿಂದ ತೆಗೆಯಲು ಬಿಡುವುದಿಲ್ಲ. ಇಂದೇ ಸಿಎಂ ಭೇಟಿಯಾಗಿ ಅವರ ಮುಂದೆ ಈ ಸಮಸ್ಯೆ ಮುಂದಿಡುತ್ತೇನೆ ಎಂದು ಹೇಳಿದ್ದಾರೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…